ಧರ್ಮಸ್ಥಳ – ಸುಬ್ರಹ್ಮಣ್ಯ ಮಧ್ಯೆ ಬಿಳಿನೆಲೆಯಲ್ಲಿ ಕಾರು ಮತ್ತು ಜೀಪು ಢಿಕ್ಕಿ, ಚಾಲಕರಿಬ್ಬರಿಗೂ ಗಾಯ

ಧರ್ಮಸ್ಥಳ – ಸುಬ್ರಹ್ಮಣ್ಯ ಮಧ್ಯೆ ಬಿಳಿನೆಲೆಯಲ್ಲಿ ಕಾರು ಮತ್ತು ಜೀಪು ಪರಸ್ಪರ ಢಿಕ್ಕಿಯಾಗಿ, ಚಾಲಕರಿಬ್ಬರೂ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಜಿಲ್ಲೆಯ ಎರಡು ಪುಣ್ಯ ತೀರ್ಥಕ್ಷೇತ್ರಗಳನ್ನು ಸಂಪರ್ಕಿಸುವ ರಸ್ತೆಯ ಬಿಳಿನೆಲೆ ಎಂಬಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಇಂದು ಭಾನುವಾರ ಬೆಳಗ್ಗೆ ಈ ಅಪಘಾತ ನಡೆದಿದೆ ಎಂದು ವರದಿಯಾಗಿದೆ. ಜೀಪು ಸುಬ್ರಹ್ಮಣ್ಯ ಕಡೆಯಿಂದ ಕಡಬಕ್ಕೆ ಆಗಮಿಸುತ್ತಿತ್ತು.
ಹುಂಡೈ ಕಾರು ಸುಬ್ರಹ್ಮಣ್ಯಕ್ಕೆ ಹೋಗುತ್ತಿತ್ತು. ಬಿಳಿನೆಲೆ ಸೇತುವೆಯ ಸಮೀಪ ಪರಸ್ಪರ ಢಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಗಾಯಗೊಂಡ ಇಬ್ಬರು ಚಾಲಕರನ್ನೂ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
