ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸುತ್ತಿರುವ ವಿಶಿಷ್ಟ ಅರ್ಥಪೂರ್ಣ ಕಾರ್ಯಕ್ರಮ ‘ಅರ್ಥಾಂತರಂಗ’ 14ನೇ ಸರಣಿಯು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಇಂದು (ದಿನಾಂಕ 30.10.2022ರಂದು) ನಡೆಯಲಿದೆ.
ಇಂದು ದಿನಾಂಕ 30.10.2022ರ ಆದಿತ್ಯವಾರ ಬೆಳಗ್ಗೆ 9 ಘಂಟೆಯಿಂದ ಆರಂಭವಾಗಲಿರುವ ಈ ‘ಅರ್ಥಾಂತರಂಗ – 14’ ಕಾರ್ಯಕ್ರಮದಲ್ಲಿ ‘ತಾಳಮದ್ದಳೆಯಲ್ಲಿ ಕರ್ಣಪರ್ವ’ ಎಂಬ ಬಗ್ಗೆ ಸಂವಾದ ನಡೆಯಲಿದೆ.
ಅರ್ಥಾಂತರಂಗ ಕಾರ್ಯಕ್ರಮವು ಈ ವರೆಗೆ 13 ಭಾಗಗಳನ್ನು ಕಂಡಿದೆ.
14ನೇ ಕಾರ್ಯಕ್ರಮವಾಗಿ ಖ್ಯಾತ ಪ್ರಸಂಗಕರ್ತೃ ಗೇರುಸೊಪ್ಪೆ ಶಾಂತಪ್ಪಯ್ಯ ಅವರ ‘ಕರ್ಣಪರ್ವ’ (ಕರ್ಣಾರ್ಜುನರ ಕಾಳಗ) ಪ್ರಸಂಗದ ಪ್ರಾತ್ಯಕ್ಷಿಕೆ ಸಹಿತ ಕಾರ್ಯಾಗಾರವನ್ನು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಆ ದಿನ ನಡೆಸಲಾಗುವುದು.
ಕಾರ್ಯಕ್ರಮದ ಸಂಪೂರ್ಣ ವಿವರಗಳಿಗೆ ಕಾರ್ಯಕ್ರಮದ ಆಹ್ವಾನಪತ್ರಿಕೆಯ ಚಿತ್ರಗಳನ್ನು ನೋಡಿ
- ನಾಳೆ ದಿನಾಂಕ 06.07.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
- ಖ್ಯಾತ ಯಕ್ಷಗಾನ ವೇಷಧಾರಿ ಕುಂಬಳೆ ಶ್ರೀಧರ ರಾವ್ ಇನ್ನಿಲ್ಲ – ಕುಂಬಳೆ ಶ್ರೀಧರ ರಾಯರ ಕಲಾಜೀವನದ ಮೇಲೊಂದು ಇಣುಕು ನೋಟ
- ಖ್ಯಾತ ಯಕ್ಷಗಾನ ಪ್ರಸಾದನ ತಜ್ಞ, ವೇಷಭೂಷಣಗಳ ನಿರ್ಮಾಪಕ ನಿಧನ
- ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
- ಶ್ರೀಮತಿ ಪರಿಣಯ, ಇಂದ್ರಕೀಲಕ, ಉತ್ತರ ಗೋಗ್ರಹಣ, ಶರಸೇತು ಬಂಧನ – ಕಟೀಲಿನಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಯಕ್ಷಗಾನ ಪ್ರದರ್ಶನಗಳು