ಕುರಿಯಾಜೆಯಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ತಾಳಮದ್ದಳೆ “ಬ್ರಹ್ಮತೇಜೋಬಲಂಬಲಂ” ಮತ್ತು “ಯತಿಪೂಜೆ”

ಬೆಳ್ಳಾರೆ ಸಮೀಪದ ಕುರಿಯಾಜೆಯಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ “ಬ್ರಹ್ಮತೇಜೋಬಲಂಬಲಂ” ಮತ್ತು “ಯತಿಪೂಜೆ” ಎಂಬ ಪ್ರಸಂಗಗಳ ಯಕ್ಷಗಾನ ತಾಳಮದ್ದಳೆ ಕೂಟ ನಡೆಯಲಿದೆ.
ದಿನಾಂಕ 13.11.2022ರ ಆದಿತ್ಯವಾರ ಬೆಳಗ್ಗೆ 9.30ಘಂಟೆಗೆ ತಾಳಮದ್ದಳೆ ಆರಂಭವಾಗಲಿದೆ.
“ಬ್ರಹ್ಮತೇಜೋಬಲಂಬಲಂ” ಪ್ರಸಂಗದಲ್ಲಿ ಕೌಶಿಕನಾಗಿ ಸುಣ್ಣಂಬಳ ವಿಶ್ವೇಶ್ವರ ಭಟ್ ಮತ್ತು ವಸಿಷ್ಠನಾಗಿ ಪೆರ್ಮುದೆ ಜಯಪ್ರಕಾಶ ಶೆಟ್ಟಿ ಅರ್ಥ ಹೇಳಲಿದ್ದಾರೆ.
ಕಲಾಭಿಮಾನಿಗಳನ್ನು ಕುರಿಯಾಜೆ ಮನೆಯವರು ಆದರದಿಂದ ಆಮಂತ್ರಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಮತ್ತು ಕಲಾವಿದರ ವಿವರಗಳಿಗೆ ಕಾರ್ಯಕ್ರಮದ ಕರಪತ್ರದ ಚಿತ್ರವನ್ನು ನೋಡಿ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

