ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ.ಜಿ ರಾಷ್ಟ್ರೀಯ ಅತ್ಲೆಟಿಕ್ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾರೆ.

ಛತ್ತೀಸ್ಗಢದ ಬಿಲಾಸ್ಪುರ್ನಲ್ಲಿ ನಡೆದ 23ರ ಹರೆಯದೊಳಗಿನ 2ನೇ ರಾಷ್ಟ್ರೀಯ ಅತ್ಲೆಟಿಕ್ ಕ್ರೀಡಾಕೂಟದಲ್ಲಿ ಟ್ರಿಪಲ್ಜಂಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
12.79 ಮೀಟರ್ ದೂರ ಜಿಗಿಯುವ ಮೂಲಕ ತನ್ನ ವೈಯಕ್ತಿಕ ದಾಖಲೆಯನ್ನೂ ಉತ್ತಮ ಪಡಿಸಿಕೊಂಡಿದ್ದಾರೆ. ಇವರು ಇತ್ತೀಚಿಗೆ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಇವರಿಗೆ ಮಾರ್ಗದರ್ಶನ ನೀಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

