ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ


ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು, ಬೆಥನಿ ಪ್ರೌಢಶಾಲೆ ಪಾoಗ್ಲಾಯಿ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ 31 ಅಕ್ಟೋಬರ್ 2022ರಂದು ನಡೆದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಗುಂಪು ಸ್ಪರ್ಧೆ ನಡೆಯಿತು.
ಈ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಅನ್ವಿತ್ ಯನ್ (ಶ್ರೀ ಶ್ರೀಪತಿ ಎನ್ ಮತ್ತು ವಿದ್ಯಾಲಕ್ಷ್ಮಿ ದಂಪತಿ ಪುತ್ರ) ಹಾಗೂ ಸಮರ್ಥ ರಾಮ ರೈ (ಶ್ರೀ ಸತೀಶ್ ಕುಮಾರ್ ರೈ ಮತ್ತು ಪ್ರಗತಿ ರೈ ದಂಪತಿ ಪುತ್ರ)
ಇವರ ತಂಡ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.