ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಅವರ ಅಣ್ಣನ ಮಗ ಚಂದ್ರಶೇಖರ್ ಅವರ ಶವ ನೀರೊಳಗಿದ್ದ ಕಾರಿನಲ್ಲಿ ಪತ್ತೆ,ಯಾಗಿದೆ.
ಐದು ದಿನಗಳ ಬಳಿಕ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಮುಳುಗಿದ್ದ ಕಾರು ಪತ್ತೆಯಾಗಿದೆ. ನೀರೊಳಗಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಚಂದ್ರಶೇಖರ್ ಶವ ಪತ್ತೆಯಾಗಿದೆ.
ಚಂದ್ರಶೇಖರ್ ಅವರ ಕ್ರೇಟಾ ಕಾರು ಸೊರಟೂರು ಬಳಿ ಇರುವ ತುಂಗಾಭದ್ರ ಕಾಲುವೆಯಲ್ಲಿ ಸಿಕ್ಕಿದೆ. ಹೊನ್ನಾಳಿ ಹಾಗೂ ನ್ಯಾಮತಿ ಮಾರ್ಗ ಮಧ್ಯೆ ಇರುವ ಕಾಲುವೆಯಲ್ಲಿ ಪತ್ತೆಯಾದ ಕಾರನ್ನು ಮೇಲಕ್ಕೆ ಎತ್ತಲಾಗಿದೆ.
ಅಣ್ಣನ ಮಗ ಚಂದ್ರಶೇಖರ್ ನ ಶವ ಕಂಡು ಶಾಸಕ ರೇಣುಕಾಚಾರ್ಯ ಅವರು ತೀವ್ರವಾಗಿ ಗೋಳಾಡಿದ್ದಾರೆ. ಕುಟುಂಬಸ್ಥರ ಆಕ್ರಂದನವನ್ನು ನೋಡಿ ಅಲ್ಲಿದ್ದವರಿಗೆಲ್ಲಾ ಕಣ್ಣು ತುಂಬಾ ನೀರು ತುಂಬಿತ್ತು.
ಶವ ಕಂಡು ಸಾವಿಗೆ ನಾನೇ ಕಾರಣ ಎಂದು ಗೋಳಾಡಿದ ಶಾಸಕರನ್ನು ಸಮಾಧಾನಪಡಿಸುವುದೇ ಅಲ್ಲಿದ್ದವರಿಗೆ ಒಂದು ಸವಾಲಾಗಿತ್ತು. “ಶವ ಎಂದು ಹೇಳಬೇಡಿ, ಚಂದ್ರು ಎಂದು ಕರೆಯಿರಿ” ಎಂದು ರೇಣುಕಾಚಾರ್ಯ ದುಃಖಿಸಿದ್ದಾರೆ.
ಈ ಮಧ್ಯೆ “ಕಾರಿನಲ್ಲಿ ಶವ ಸಿಕ್ಕಿದೆ, ಉಳಿದದ್ದು ತನಿಖೆಯಿಂದ ಹೊರಬರಬೇಕಿದೆ. ಈ ಬಗ್ಗೆ ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತೇವೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
- ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ – ಎಂಟು ಜನರ ಮೇಲೆ ಮಾನನಷ್ಟ ದೂರು ದಾಖಲಿಸಿದ ರಿಮಾ ಕಲ್ಲಿಂಗಲ್
- ಕಾಳಿಂಗ ನಾವಡ ಪ್ರಶಸ್ತಿ 2024 – ಯಾರಿಗೆ ಒಲಿಯಿತು ಅದೃಷ್ಟ?
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ