ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದ 2022-23ನೇ ಸಾಲಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ತೃತೀಯ ಬಿ.ಎ. ವಿದ್ಯಾರ್ಥಿನಿ ನಯನಾ ಹಾಗೂ ಕಾರ್ಯದರ್ಶಿಯಾಗಿ ದ್ವಿತೀಯ ಬಿ.ಎ. ವಿದ್ಯಾರ್ಥಿ ಭರತ್ ಆಯ್ಕೆಯಾಗಿದ್ದಾರೆ.
ನಯನಾ ಅವರು ವಾಲ್ತಾಜೆ ನಿವಾಸಿಯಾ ಸತ್ಯನಾರಾಯಣ ಬಿ. ಹಾಗೂ ವಿನಯ ದಂಪತಿ ಪುತ್ರಿ. ಅಂತೆಯೇ ಭರತ್ ಅವರು ಪೆರ್ನೆ ನಿವಾಸಿ ಗಂಗಾಧರ್ ಹಾಗೂ ಸುಜಾತ ದಂಪತಿಯ ಪುತ್ರ.
ಪ್ರಥಮ ಬಿ.ಎ. ಪ್ರತಿನಿಧಿಯಾಗಿ ಮೈಸೂರಿನ ವಿಜೇಂದ್ರ ಎಸ್., ಕುಮುದಾ ವಿಜೇಂದ್ರ ಅವರ ಪುತ್ರ ವಿಕ್ರಮ್, ದ್ವಿತೀಯ ಬಿ.ಎ. ಪ್ರತಿನಿಧಿಯಾಗಿ ಪೆರ್ನೆಯ ಬಾಲಕೃಷ್ಣ, ವನಿತಾ ದಂಪತಿ ಪುತ್ರ ನವನೀತ್, ದ್ವಿತೀಯ ಬಿ.ಕಾಂ. ಪ್ರತಿನಿಧಿಯಾಗಿ ವೀರಮಂಗಲದ ಮನೋಹರ ವಿ., ನಾಗವೇಣಿ ಕೆ. ದಂಪತಿಯ ಪುತ್ರಿ ಲೇಖಾ,
ತೃತೀಯ ಬಿ.ಎ. ಪ್ರತಿನಿಧಿಯಾಗಿ ಕಿರಿಮಂಜೇಶ್ವರದ ದೇವರಾಜ್ ಆರ್, ರಾಜೇಶ್ವರಿ ದಂಪತಿಯ ಪುತ್ರಿ ಮೇಘಾ ಡಿ. ಮತ್ತು ತೃತೀಯ ಬಿ.ಎಸ್ಸಿ. ಪ್ರತಿನಿಧಿಯಾಗಿ ಪೆರ್ಲ ಸ್ವರ್ಗದ ಬಾಲಚಂದ್ರ ಬಿ.ವಿ., ಪ್ರಿಯಾ ದಂಪತಿ ಪುತ್ರಿ ವರಣ್ಯ ಬಿ. ಆಯ್ಕೆಯಾಗಿದ್ದಾರೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ