ಪುತ್ತೂರಿನ ನವವಿವಾಹಿತೆಯೋರ್ವರು ಪುತ್ತೂರಿನಲ್ಲಿರುವ ತನ್ನ ಪತಿಯ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 26 ವರ್ಷದ ವೈಶಾಲಿ ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ಯುವತಿ.

ಪುತ್ತೂರು ತಾಲ್ಲೂಕಿನ ಮಾಡನ್ನೂರು ಗ್ರಾಮದ ಸಾಂತ್ಯ ಎಂಬಲ್ಲಿರುವ ಈಕೆ ಕಳೆದ ಏಳು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು ಎಂದು ತಿಳಿದುಬಂದಿದೆ.
ಈಕೆ ತನ್ನ ಪತಿಯ ಮನೆಯಲ್ಲಿರುವಾಗಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡದ್ದಾರೆ ಎಂದು ತಿಳಿದುಬಂದಿದೆ. ಇವರು ಸಾಂತ್ಯ ನಿವಾಸಿ ಜಯಪ್ರಕಾಶ್ ಅವರ ಪತ್ನಿ.
ಜಯಪ್ರಕಾಶ್ ಅವರ ಜತೆ 7ತಿಂಗಳ ಹಿಂದೆ ವೈಶಾಲಿ ಅವರ ವಿವಾಹ ನೆರವೇರಿತ್ತು. ವೈಶಾಲಿ ಅವರು ಶನಿವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಈ ಬಗ್ಗೆ ಮೃತಳ ತಾಯಿ ಪೊಲೀಸರಿಗೆ ದೂರುನೀಡಿದ್ದು ಸಂಪ್ಯ ಪೊಲೀಸರಿಗೆ ದೂರು ನೀಡಿದ್ದು ಆತ್ಮಹತ್ಯೆಗೆ ಕಾರಣ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

