

ಪುತ್ತೂರು, ನ 8: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನವೆಂಬರ್ 10ರಂದು ವಾರ್ಷಿಕೋತ್ಸವವು ಜರುಗಲಿದೆ.


ಪೂರ್ವಾಹ್ನ 9.00 ನಡೆಯುವ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ವಹಿಸಲಿದ್ದು, ಅತಿಥಿಗಳಾಗಿ ಸಕಲೇಶಪುರದ ರೋಟರಿ ಶಾಲೆಯ ಮುಖ್ಯೋಪಾಧ್ಯಾಯ ಸುಮಂತ್ ಮತ್ತು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಹರಿಕಿರಣ್ ಕೆ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ, ಸಂಚಾಲಕ ಎಂ. ಗೋಪಾಲಕೃಷ್ಣ ಭಟ್ ಉಪಸ್ಥಿತರಿರುತ್ತಾರೆ.
ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

