ಮಗುವಿಗೆ ಎದೆಹಾಲು ನೀಡಲು ತೆರಳುತ್ತಿದ್ದಾಗ ಶಿಕ್ಷಕಿಯೊಬ್ಬರು ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಲಾರಿ ಢಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ನಡೆದಿದೆ.
ಕಣ್ಣೂರು: ಮಗುವಿಗೆ ತನ್ನ ಎದೆ ಹಾಲುಣಿಸಲು ಮನೆಗೆ ಹೋಗುತ್ತಿದ್ದ ವೇಳೆ ಸ್ಕೂಟರ್ಗೆ ಮಿನಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕಿ ಸಾವನ್ನಪ್ಪಿದ್ದಾರೆ.
ಮೃತರನ್ನು ಕೇರಳದ ಕಣ್ಣೂರು ಜಿಲ್ಲೆಯ ಮುರಿಂಗೋಡಿಯ ಸಜೀರ್ ಎಂಬುವರ ಪತ್ನಿ ರಶೀದಾ (30) ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ.
ಅವಳು ಊಟ ಮಾಡಲು ಮತ್ತು ತನ್ನ ಒಂದೂವರೆ ತಿಂಗಳ ಮಗುವಿಗೆ ಹಾಲುಣಿಸಲು ತನ್ನ ಸ್ಕೂಟರ್ನಲ್ಲಿ ಮನೆಗೆ ಹೋಗುತ್ತಿದ್ದಳು. ಪೆರವೂರ್ನ ಇರಿಟ್ಟಿ ರಸ್ತೆಯಲ್ಲಿ ಆಕೆಯ ಸ್ಕೂಟರ್ಗೆ ಲಾರಿ ಡಿಕ್ಕಿ ಹೊಡೆದಿದೆ.
ಆಕೆಯ ಪತಿ ಸಜೀರ್ ತೊಂಡಿಯಿಲ್ನಲ್ಲಿ ಅಂಗಡಿ ನಡೆಸುತ್ತಿದ್ದರು. ಅವರಿಗೆ ಶಹದಾ ಫಾತಿಮಾ ಮತ್ತು ಹಿದ್ವಾ ಫಾತಿಮಾ ಎಂಬಇಬ್ಬರು ಮಕ್ಕಳು ಇದ್ದಾರೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ