ಹಿರಿಯ ಮದ್ದಳೆಗಾರ ಶ್ರೀ ಪೆರುವಾಯಿ ನಾರಾಯಣ ಭಟ್ ಅವರಿಗೆ ‘ಶ್ರೀಹರಿಲೀಲಾ ಯಕ್ಷನಾದ ಪ್ರಶಸ್ತಿ’

ಯಕ್ಷಗಾನದ ಗುರು ದಂಪತಿ ಖ್ಯಾತ ಮದ್ದಳೆಗಾರ ಶ್ರೀ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಖ್ಯಾತ ಭಾಗವತರಾದ ಲೀಲಾವತಿ ಬೈಪಾಡಿತ್ತಾಯರ ಹೆಸರಿನಲ್ಲಿ ಡಿಜಿ ಯಕ್ಷ ಫೌಂಡೇಶನ್ (ರಿ) ಬೆಂಗಳೂರು ಮೂಲಕ ಕೊಡಮಾಡುವ ಶ್ರೀಹರಿಲೀಲಾ ಯಕ್ಷನಾದ 2ನೇ ವರ್ಷದ ಪ್ರಶಸ್ತಿಯನ್ನು ಹಿರಿಯ ಮದ್ದಳೆಗಾರ ಶ್ರೀ ಪೆರುವಾಯಿ ನಾರಾಯಣ ಭಟ್ ಅವರಿಗೆ ನೀಡಿ ಗೌರವಿಸಲಾಯಿತು.
ಮೊನ್ನೆ ಶನಿವಾರ (ನ.12) ಮೂಡುಬಿದಿರೆಯ ಆಲಂಗಾರು ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಯಕ್ಷಗಾನ ವಿದ್ವಾಂಸ, ವಿಮರ್ಶಕ, ಅರ್ಥಧಾರಿ ಡಾ.ಮಾಳ ಪ್ರಭಾಕರ ಜೋಶಿ,
ಶ್ರೀ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಲೀಲಾವತಿ ಬೈಪಾಡಿತ್ತಾಯ, ಮದ್ದಳೆಗಾರ ಕೃಷ್ಣಪ್ರಕಾಶ ಉಳಿತ್ತಾಯ, ಆರತಿ ಪಟ್ರಮೆ, ಡಾ. ಸಿಬಂತಿ ಪದ್ಮನಾಭ, ಬೈಪಾಡಿತ್ತಾಯ ಗುರುಗಳ ಶಿಷ್ಯರಾದ ಚಂದ್ರಶೇಖರ ಕೊಂಕಣಾಜೆ, ಗಿರೀಶ್ ಕಿನಿಲಕೋಡಿ, ಆನಂದ ಗುಡಿಗಾರ, ಡಿಜಿ ಯಕ್ಷ ಫೌಂಡೇಶನ್ ನಿರ್ದೇಶಕ ಅವಿನಾಶ್ ಬೈಪಾಡಿತ್ತಾಯ ಇದ್ದಾರೆ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

