ಔರಂಗಾಬಾದ್ನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಟ್ಯೂಷನ್ ಮುಗಿಸಿ ತನ್ನ ಮನೆಗೆ ಹಿಂದಿರುಗುತ್ತಿದ್ದಾಗ, ಚಾಲಕ ತನ್ನ ಮೇಲೆ ಕಿರುಕುಳ ನೀಡಲು ಯತ್ನಿಸಿದ ನಂತರ ಚಲಿಸುತ್ತಿದ್ದ ಆಟೋರಿಕ್ಷಾದಿಂದ ಜಿಗಿಯಲು ನಿರ್ಧರಿಸಿದಳು.

ಈ ಘಟನೆ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ವಾಹನದ ಚಾಲಕ ತನಗೆ ಕಿರುಕುಳ ನೀಡುತ್ತಿದ್ದಾಗ ಬಾಲಕಿಯೊಬ್ಬಳು ವೇಗವಾಗಿ ತಾನು ಹೋಗುತ್ತಿದ್ದ ಆಟೋರಿಕ್ಷಾದಿಂದ ಜಿಗಿದಿದ್ದಾಳೆ.
ಮೂಲಗಳ ಪ್ರಕಾರ ಅಪ್ರಾಪ್ತ ಬಾಲಕಿಯು ಚಾಲಕನ ಕೈಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಚಲಿಸುತ್ತಿದ್ದ ವಾಹನದಿಂದ ಹಾರಿ ತನಗೆ ತಾನೇ ಅಪಾಯ ತಂದುಕೊಂಡಿದ್ದಾಳೆ. ಅವಳು ಆರೀತಿ ಹಾರದಿದ್ದರೆ ಆಟೋ ಚಾಲಕನಿಂದ ಅಪಾಯ ಎದುರಾಗುತ್ತಿತ್ತು.
ಜನನಿಬಿಡ ಮುಖ್ಯ ರಸ್ತೆಯಲ್ಲಿ ಹಾರಿದನಂತರ ಹುಡುಗಿಯ ತಲೆಗೆ ಗಂಭೀರ ಗಾಯವಾಗಿದೆ. ಆರೋಪಿ ಆಟೋ ಚಾಲಕನನ್ನು ಸೈಯದ್ ಅಕ್ಬರ್ ಹಮೀದ್ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ.
ಚಾಲಕನ ಅಶ್ಲೀಲ ವರ್ತನೆಗಳು ಮತ್ತು ಅಶ್ಲೀಲ ಮಾತುಗಳನ್ನು ಗ್ರಹಿಸಿದ ನಂತರ ಹುಡುಗಿ ಬೇರೆ ದಾರಿ ಕಾಣದೆ ವೇಗವಾಗಿ ವಾಹನದಿಂದ ಜಿಗಿದಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಹುಡುಗಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ,

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

