Friday, September 20, 2024
Homeಸುದ್ದಿಯಕ್ಷಗಾನದ ಯುವ ಭಾಗವತ ನೇಣು ಬಿಗಿದು ಆತ್ಮಹತ್ಯೆ 

ಯಕ್ಷಗಾನದ ಯುವ ಭಾಗವತ ನೇಣು ಬಿಗಿದು ಆತ್ಮಹತ್ಯೆ 

ತೆಂಕುತಿಟ್ಟು ಯಕ್ಷಗಾನದ ಯುವ ಭಾಗವತರೋರ್ವರು ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತೆಂಕುತಿಟ್ಟಿನ ಭಾಗವತಿಕೆಯಲ್ಲಿ ತನ್ನದೇ ಛಾಪನ್ನು ಮೂಡಿಸಿ ಹೆಸರು ಮಾಡುತ್ತಿದ್ದ ಯುವ ಭಾಗವತರಾದ ಕೀರ್ತನ್ ಶೆಟ್ಟಿ ವಗೆನಾಡು ಅವರು ಆತ್ಮಹತ್ಯೆ ಮಾಡಿಕೊಂಡ ನತದೃಷ್ಟ ಕಲಾವಿದರು. 

ಭಾಗವತರು ಇಂದು ಮುಡಿಪು ಸಮೀಪ ಮೂಳೂರು ಬಳಿ ತಮ್ಮ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ.ಇವರು ಬಪ್ಪನಾಡು ಹಾಗೂ ಇನ್ನಿತರ ಮೇಳಗಳಲ್ಲಿ ಭಾಗವತರಾಗಿ ಕಲಾಸೇವೆ ಮಾಡಿದ್ದರು.

ಇತ್ತೀಚಿಗೆ ಚಿಕ್ಕಮೇಳಗಳಲ್ಲಿಯೂ ಭಾಗವತರಾಗಿ ತಿರುಗಾಟ ನಡೆಸಿದ್ದರು. ಕೆಲವೊಂದು ವೈಯುಕ್ತಿಕ ಹಾಗೂ ಕೌಟುಂಬಿಕ ಸಮಸ್ಯೆಗಳಿಂದ  ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಕೊಣಾಜೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. 

“ಆತ್ಮಹತ್ಯೆ ಯಾವುದಕ್ಕೂ ಪರಿಹಾರ ಅಲ್ಲ, ನಿಮ್ಮ ಯಾವುದೇ ಸಮಸ್ಯೆಗಳಿಗೆ ಮಾನಸಿಕ ತಜ್ಞರ ಸಹಾಯ ಪಡೆಯಿರಿ”

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments