ಪುತ್ತೂರು,ನ22: ಹರಿಯಾಣದ ಕುರುಕ್ಷೇತ್ರದಲ್ಲಿ ನವೆಂಬರ್ 19 ರಿಂದ 23ರ ವರೆಗೆ ನಡೆಯುತ್ತಿರುವ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

100ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ರಜತ್ ಆರ್ ಭಟ್ ಕಂಚಿನ ಪದಕವನ್ನು ಪಡೆದುಕೊ೦ಡಿದ್ದಾರೆ. ಈತನು ವಿಟ್ಲದ ರಾಜೇಶ್ ಭಟ್ ಮತ್ತು ರಾಧಿಕಾ ಭಟ್ ದಂಪತಿ ಪುತ್ರ.
ಉದ್ದ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ನಿಹಾಲ್ರಾಜ್ ಕಂಚಿನ ಪದಕದೊ೦ದಿಗೆ ತೃತೀಯ ಸ್ಥಾನವನ್ನುಪಡೆದುಕೊಂಡಿದ್ದಾರೆ. ಈತನು ಕಬಕದ ನಾಗರಾಜ್ ಹೆಗ್ಡೆ ಮತ್ತು ಭಾನುಮತಿ ದಂಪತಿ ಪುತ್ರ.
4×100 ಮೀಟರ್ ರಿಲೇ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ರಜತ್ ಆರ್ ಭಟ್, ಪವನ್ ಕುಮಾರ್, ಪ್ರಮಥ್ ರೈ ಮತ್ತು ಧನುಷ್ ರವರನ್ನು ಒಳಗೊಂಡ ತಂಡವು ಕ೦ಚಿನ ಪದಕವನ್ನು ಪಡೆದುಕೊ೦ಡಿದೆ.
ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ವಿವೇಕಾನ೦ದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ನಿಹಾಲ್ ರಾಜ್ ಬೆಳ್ಳಿಯ ಪದಕದೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈತನು ಕಬಕದ ನಾಗರಾಜ್ ಹೆಗ್ಡೆ ಮತ್ತು ಭಾನುಮತಿ ದಂಪತಿ ಪುತ್ರ.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಾದ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS

