

ಉಡುಪಿ : ಕಟೀಲು ಮೇಳದ ಕಲಾವಿದ ಕೀರ್ತನ್ಆರ್. ಶೆಟ್ಟಿ (39) ಮತ್ತು ಮಂದಾರ್ತಿ ಮೇಳದ ಕಲಾವಿದನಾಗಿದ್ದ ಚಂದ್ರ ನಾಯ್ಕ ನಂಚಾರು (29) ಇಬ್ಬರು ಯುವ ಕಲಾವಿದರು ಅಕಾಲಿಕವಾಗಿ ಈ ಲೋಕಯಾತ್ರೆ ಮುಗಿಸಿದ್ದು, ಯಕ್ಷಗಾನಕ್ಕೆ ಮತ್ತು ಆಯಾ ಕುಟುಂಬಕ್ಕೆ ಸಹಿಸಲಾಗದ ಆಘಾತಕರ ವಾರ್ತೆಯಾಗಿದೆ.
ಕೀರ್ತನ್ ಆರ್. ಶೆಟ್ಟಿ ಅವರು ಕಟೀಲು ಮೇಳವೂ ಸೇರಿ ವಿವಿಧ ಮೇಳಗಳಲ್ಲಿ ಸುಮಾರು 20 ವರ್ಷಗಳ ಕಾಲ ಭಾಗವತರಾಗಿ ಸೇವೆ ಸಲ್ಲಿಸಿದ್ದು ದಿನಾಂಕ 18-11-2022ರಂದು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಚಂದ್ರ ನಾಯ್ಕ ಐದಾರು ವರ್ಷ ಮಂದಾರ್ತಿ ಮೇಳದಲ್ಲಿದ್ದು ಕಳೆದ ಎರಡು ವರ್ಷದಿಂದ ಮೇಳಕ್ಕೆ ಹೋಗುತ್ತಿರಲಿಲ್ಲ.
ಮೇಳದಲ್ಲಿ ಸ್ತ್ರೀವೇಷ ಮಾಡುತ್ತಿದ್ದ ಅವರು 24-11-2022ರಂದು ಗರ್ಭಿಣಿ ಹೆಂಡತಿ ಮತ್ತು ಎರಡು ವರ್ಷದ ಹೆಣ್ಣು ಮಗುವನ್ನುಅಗಲಿದ್ದಾರೆ.
ಇವರ ನಿಧನಕ್ಕೆಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

