

ಯಕ್ಷಲೋಕದ ಗಾನದೇವತೆಯ ಕಾಳಿಂಗ ನಾವಡರ ನೆನಪಿನಲ್ಲಿ ಕಲಾಕದಂಬ ಆರ್ಟ್ ಸೆಂಟರ್ ಪ್ರತೀ ವರ್ಷ ಯಕ್ಷಗಾನದ ಸಾಧಕರೊಬ್ಬರಿಗೆ ಕಾಳಿಂಗ ನಾವಡ ಪ್ರಶಸ್ತಿ ನೀಡುತ್ತಿದೆ.
ಹತ್ತು ಸಾವಿರ ನಗದು, ಬೆಳ್ಳಿ ತಟ್ಟೆ, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆಯನ್ನು ಕಾಳಿಂಗ ನಾವಡ ಪ್ರಶಸ್ತಿ ಒಳಗೊಂಡಿರುತ್ತದೆ.
ಗುಂಡ್ಮಿ ಸದಾನಂದ ಐತಾಳ್, ಸುಬ್ರಹ್ಮಣ್ಯ ಧಾರೇಶ್ವರ್, ಕೆಪ್ಪೆಕೆರೆ ಸುಬ್ರಾಯ ಹೆಗಡೆ, ಎಳ್ಳಾರೆ ವೆಂಕಟ್ರಾಯ ನಾಯಕ್, ನೆಬ್ಬೂರು ನಾರಾಯಣ ಹೆಗಡೆ,ಕರ್ಕಿ ಪ್ರಭಾಕರ ಭಂಡಾರಿ, ಕೆ.ಪಿ ಹೆಗ್ಡೆ, ಟಿ ಜಯಂತ್ ಕುಮಾರ್, ಮಂದಾರ್ತಿ ರಾಮಕೃಷ್ಣ, ಶ್ರೀಧರ ಹೆಬ್ಬಾರ್, ಗೋವಿಂದ ಉರಾಳ ಹಾಗೂ ಶಂಕರ ಭಾಗವತ ಯಲ್ಲಾಪುರ ಅವರು ಈಗಾಗಲೇ ಕಾಳಿಂಗ ನಾವಡ ಪ್ರಶಸ್ತಿಗೆ ಬಾಜನರಾಗಿದ್ದಾರೆ.
ಈ ಸಾಲಿನ “ಕಾಳಿಂಗ ನಾವಡ ಪ್ರಶಸ್ತಿ” ಯನ್ನು ಖ್ಯಾತ ಭಾಗವತರು, ಮದ್ದಳೆವಾದಕರು ಹಾಗೂ ಚಂಡೆ ವಾದಕರೂ ಆಗಿ ಈಗಲೂ ತಮ್ಮ ಪಾರಮ್ಯ ಮೆರೆಯುತ್ತಿರುವ “ಬಿದ್ಕಲ್ಕಟ್ಟೆ ಕೃಷ್ಣಯ್ಯ ಆಚಾರ್ಯರಿಗೆ” ಬೆಂಗಳೂರಿನ ಚಾಮರಾಜಪೇಟೆಯ ಉದಯಭಾನು ಕಲಾಸಂಘದ ಸಭಾ ಭವನದಲ್ಲಿ
25-12-22 ರ ಸಂಜೆ 5 ಘಂಟೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ನೀಡಲಾಗುವುದೆಂದು ಕಲಾಕದಂಬ ಆರ್ಟ್ ಸೆಂಟರ್ ನ ನಿರ್ದೇಶಕರಾದ ಡಾ.ರಾಧಾಕೃಷ್ಣ ಉರಾಳರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ-9448510582,9886066732