ಬೆಂಗಳೂರಿನ ಹೊರಮಾವು ಎಂಬಲ್ಲಿ ಯುವತಿ ಕೃಷ್ಣಕುಮಾರಿಯನ್ನು ಆಕೆಯ ಲೈವ್ ಇನ್ ಜೀವನ ಸಂಗಾತಿ ಸಂತೋಷ್ ಧಾಮಿ ಅವರು ತೀವ್ರ ಜಗಳದ ನಂತರ ಗೋಡೆಗೆ ತಲೆ ಬಡಿದು ಹತ್ಯೆ ಮಾಡಿದ್ದಾನೆ ಎಂದು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಎಸ್ ಗುಳೇದ್ ಹೇಳಿದ್ದಾರೆ.
ಜಗಳದ ನಂತರ ನೇಪಾಳಿ ಪ್ರಜೆಯೊಬ್ಬ ತನ್ನ ಸಂಗಾತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ರಾಮಮೂರ್ತಿನಗರದ ಟಿಸಿ ಪಾಳ್ಯದಲ್ಲಿ ಬುಧವಾರ ನಡೆದಿದೆ.
ಮೃತರನ್ನು ಕೃಷ್ಣಕುಮಾರಿ (23) ಮತ್ತು ಆರೋಪಿ ಸಂತೋಷ್ ಧಾಮಿ (27) ಎಂದು ಗುರುತಿಸಲಾಗಿದೆ. ಕೃಷ್ಣಕುಮಾರಿ ಹೊರಮಾವುನಲ್ಲಿರುವ ಯುನಿಸೆಕ್ಸ್ ಸಲೂನ್ನಲ್ಲಿ ಕೆಲಸ ಮಾಡುತ್ತಿದ್ದರೆ, ಸಂತೋಷ್ ಟಿಸಿ ಪಾಳ್ಯದ ಪುರುಷರ ಸಲೂನ್ನಲ್ಲಿ ಕೆಲಸ ಮಾಡುತ್ತಿದ್ದ.
ಇಬ್ಬರೂ ಪ್ರೀತಿಸುತ್ತಿದ್ದು, ಟಿಸಿ ಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೂಲತಃ ನೇಪಾಳ ದೇಶದವರಾಗಿದ್ದ ಇಬ್ಬರೂ ಒಂದು ವರ್ಷದ ಹಿಂದೆ ಬೆಂಗಳೂರಿಗೆ ಬಂದಿದ್ದರು.
ಬುಧವಾರ ಬೆಳಗ್ಗೆ ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಕೋಪದ ಭರದಲ್ಲಿ ಸಂತೋಷ್ ಕೃಷ್ಣಕುಮಾರಿಯನ್ನು ಕೊಂದಿದ್ದಾನೆ. ಪೊಲೀಸರು ಸ್ಥಳದಲ್ಲಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
- ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮದರಸಾದಲ್ಲಿ ಉರ್ದು ಕಲಿಸುತ್ತಿದ್ದ ಶಿಕ್ಷಕ
- 50 ವರ್ಷಗಳ ನಂತರ ಮತ್ತೆ ಅವಾಂತರ ಸೃಷ್ಟಿಸಿದ ‘ಕೋಸಿ’ ನದಿ – ಉತ್ತರ ಬಿಹಾರ ಪ್ರವಾಹದಲ್ಲಿ ಮುಳುಗಡೆಯಾಗುವ ಭೀತಿ, ಮನೆ ಬಿಟ್ಟು ಹೋಗುತ್ತಿರುವ ಜನ
- ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ 15 ಲಕ್ಷ ರೂಪಾಯಿಗಳ ಕೊಡುಗೆ
- ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ – ಇಸ್ರೇಲ್ ಅಧಿಕೃತ ಹೇಳಿಕೆ
- ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ಪುತ್ತೂರಿನಲ್ಲಿ ದೂರು ದಾಖಲು – ಹಿಂದೂ ಧರ್ಮಕ್ಕೆ ಅವಮಾನ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ