
ದ ಕ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಚೇರಿ ಮಂಗಳೂರು ಮತ್ತು ಸರಕಾರಿ ಪ್ರೌಢಶಾಲೆ ಅತ್ತಾವರ ಇದರ ಆಶ್ರಯದಲ್ಲಿ
ನವೆಂಬರ್ 15, 16ರಂದು ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ 7ನೇತರಗತಿ ವಿದ್ಯಾರ್ಥಿನಿ ದಿವಿಜ್ಞಾ ಯು ಎಸ್ (ಕಲ್ಲರ್ಪೆಯ ಶಿವಪ್ರಸಾದ್ ಮತ್ತು ಪವಿತ್ರ ದಂಪತಿಯ ಪುತ್ರಿ)
14ರ ವಯೋಮಾನದ ಪ್ರಾಥಮಿಕ ವಿಭಾಗದ ಬಾಲಕಿಯರ 100ಮೀ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಯಾಗಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
