
ವಿದ್ಯಾ ಭಾರತಿ ಅಖಿಲ್ ಭಾರತೀಯ ಶಿಕ್ಷಣ ಪ್ರತಿಷ್ಠಾನ ಮತ್ತು ಗೀತಾ ಆವಾಸಿಯ ವಿದ್ಯಾಲಯ ಕುರುಕ್ಷೇತ್ರ ಹರಿಯಾಣ ಇಲ್ಲಿ ನವೆಂಬರ್ 19ರಿಂದ 23ರ ವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ 3 ಚಿನ್ನ, 5 ಬೆಳ್ಳಿ, 3 ಕಂಚಿನ ಪದಕ ಪಡೆದುಕೊಂಡಿದ್ದು 14ರ ವಯೋಮಾನದ ಬಾಲಕಿಯ ವಿಭಾಗದಲ್ಲಿ ಪ್ರಥಮ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
14 ವಯೋಮಾನದ ಬಾಲಕಿಯರ ವಿಭಾಗದಲ್ಲಿ ಎಂಟನೇ ತರಗತಿಯ ಕೃತಿ ಕೆ (ಬನ್ನೂರು ಕೊರಗಪ್ಪ ಗೌಡ ಮತ್ತು ವನಿತಾ ದಂಪತಿ ಪುತ್ರಿ) 4 X 100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ, 600ಮೀ ನಲ್ಲಿ ದ್ವಿತೀಯ, 400 ಮೀಟರ್ ನಲ್ಲಿ ತೃತೀಯ ಸ್ಥಾನ, 8ನೇ ತರಗತಿ ಯ ಡಿಂಪಲ್ ಶೆಟ್ಟಿ, (ಮೇರ್ಲ ಉದಯ ಶೆಟ್ಟಿ ಮತ್ತು ಸುನೀತಾ ಶೆಟ್ಟಿ ದಂಪತಿ ಪುತ್ರಿ) 4 X 100 ಮೀಟರ್ ರಿಲೇ ಪ್ರಥಮ,
ಶ್ರೀ ವರ್ಣ ಪಿ ಡಿ (ಪಾಲೆತ್ತಡಿ ಧರ್ಣಪ್ಪ ಗೌಡ ಮತ್ತು ಮಮತಾ ಪಿ ದಂಪತಿ ಪುತ್ರಿ)4 X100 ರಿಲೇ ಸ್ಪರ್ಧೆಯಲ್ಲಿ ಪ್ರಥಮ, ಎತ್ತರ ಜಿಗಿತ ದ್ವಿತೀಯ, 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ವಂಶಿ.ಬಿ.ಕೆ 10ನೇ ತರಗತಿ (ಬಪ್ಪಳಿಗೆ ಕಮಲಾಕ್ಷ ಮತ್ತು ಜಯಲತಾ ದಂಪತಿ ಪುತ್ರಿ) 100 ಮೀಟರ್ ಹರ್ಡಲ್ಸ್ ನಲ್ಲಿ ದ್ವಿತೀಯ, 4 X100 ಮೀಟರ್ ರಿಲೇ ದ್ವಿತೀಯ, 4X400ಮೀ ರಿಲೇ ತೃತೀಯ,
ಬಿ ಲಿಖಿತ ರೈ 10ನೇ ತರಗತಿ ( ಚನಿಲ ಬಿ ಜಗನ್ನಾಥ ರೈ ಮತ್ತು ಗೀತಾ ಜೆ ರೈ ದಂಪತಿ ಪುತ್ರಿ) 4 X100ಮೀ ರಿಲೆಯಲ್ಲಿ ದ್ವಿತೀಯ, 4 X400ಮೀ ರಿಲೇ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ
ಕೃಪಾಲ್.ಪಿ.ಕೆ, ಅನ್ನಿಕಾ ಎಂ, ಚರಣ್ ಕುಮಾರ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

