
ಕನ್ನಡದ ಜನಪ್ರಿಯ ಸಿನಿಮಾ ‘ಕಾಂತಾರ’ ಚಿತ್ರತಂಡ ಹಾಗೂ ಅಭಿಮಾನಿಗಳು ಈಗ ನಿರಾತಂಕದಿಂದ ಉಸಿರಾಡುವಂತಾಗಿದೆ. ಕಾಂತಾರ ಸಿನಿಮಾದ ಜನಪ್ರಿಯ ಹಾಡು ‘ವರಾಹ ರೂಪಂ’ ಹಾಡಿಗೆ ಇದ್ದ ಎಲ್ಲಾ ಅಡೆತಡೆ ಈಗ ನಿವಾರಣೆಯಾಗಿದೆ,
ಈ ಬಗ್ಗೆ ಥೈಕ್ಕುಡಂ ಬ್ರಿಜ್ ಅರ್ಜಿಯನ್ನು ವಜಾಗೊಳಿಸಿ ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ಈ ಬಗ್ಗೆ ನಿರ್ದೇಶಕ, ನಟ ರಿಷಬ್ ಶೆಟ್ಟಿಯವರು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಮೊದಲು ಥೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನು ವಜಾಗೊಳಿಸಿದ್ದ ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿತ್ತು.
ಈಗ ಆ ತಡೆಯಾಜ್ಞೆಯನ್ನೂ ಕೇರಳಹೈಕೋರ್ಟ್ ತೆರವುಗೊಳಿಸಿದ್ದರಿಂದ ಇನ್ನು ಮುಂದೆ ವರಾಹರೂಪಂ ಹಾಡನ್ನು ನೋಡಬಹುದು.
” ದೈವಾನು ದೈವಗಳ ಆಶೀರ್ವಾದ ಹಾಗು ಜನರ ಅಭಿಮಾನದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ. ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ OTT platform ನಲ್ಲಿ ಹಾಡನ್ನು ಬದಲಾಯಿಸಲಿದ್ದೇವೆ” ಎಂದು ರಿಷಬ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
