
ಕನ್ನಡದ ಜನಪ್ರಿಯ ಸಿನಿಮಾ ‘ಕಾಂತಾರ’ ಚಿತ್ರತಂಡ ಹಾಗೂ ಅಭಿಮಾನಿಗಳು ಈಗ ನಿರಾತಂಕದಿಂದ ಉಸಿರಾಡುವಂತಾಗಿದೆ. ಕಾಂತಾರ ಸಿನಿಮಾದ ಜನಪ್ರಿಯ ಹಾಡು ‘ವರಾಹ ರೂಪಂ’ ಹಾಡಿಗೆ ಇದ್ದ ಎಲ್ಲಾ ಅಡೆತಡೆ ಈಗ ನಿವಾರಣೆಯಾಗಿದೆ,
ಈ ಬಗ್ಗೆ ಥೈಕ್ಕುಡಂ ಬ್ರಿಜ್ ಅರ್ಜಿಯನ್ನು ವಜಾಗೊಳಿಸಿ ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ಈ ಬಗ್ಗೆ ನಿರ್ದೇಶಕ, ನಟ ರಿಷಬ್ ಶೆಟ್ಟಿಯವರು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಮೊದಲು ಥೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನು ವಜಾಗೊಳಿಸಿದ್ದ ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿತ್ತು.
ಈಗ ಆ ತಡೆಯಾಜ್ಞೆಯನ್ನೂ ಕೇರಳಹೈಕೋರ್ಟ್ ತೆರವುಗೊಳಿಸಿದ್ದರಿಂದ ಇನ್ನು ಮುಂದೆ ವರಾಹರೂಪಂ ಹಾಡನ್ನು ನೋಡಬಹುದು.
” ದೈವಾನು ದೈವಗಳ ಆಶೀರ್ವಾದ ಹಾಗು ಜನರ ಅಭಿಮಾನದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ. ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ OTT platform ನಲ್ಲಿ ಹಾಡನ್ನು ಬದಲಾಯಿಸಲಿದ್ದೇವೆ” ಎಂದು ರಿಷಬ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ

