

ಇಂದಿನಿಂದ ಪುತ್ತೂರಿನಲ್ಲಿ ಯಕ್ಷೋತ್ಸವ ನಡೆಯಲಿದೆ. ಹನುಮಗಿರಿ ಮೇಳದವರಿಂದ ನಿರಂತರ ಐದು ದಿನಗಳ ಯಕ್ಷಗಾನ ಕಾರ್ಯಕ್ರಮ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ – ಶಿವಪಂಚಾಕ್ಷರಿ ಮಹಿಮೆ, ಕುಮಾರ ವಿಜಯ, ವೇದೋದ್ಧರಣ- ಶ್ರೀನಿವಾಸ ಕಲ್ಯಾಣ, ನಮೋ ರಘುವಂಶದೀಪ ಮತ್ತು ಭಾರತ ಜನನಿ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ (ಹನುಮಗಿರಿ ಮೇಳ) ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದೊಂದಿಗೆ ನಿರಂತರ ಐದು ದಿನಗಳ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಈ ಕಾರ್ಯಕ್ರಮ ಈ ತಿಂಗಳ ಐದರಿಂದ ಅಂದರೆ ದಿನಾಂಕ 05.12.2022 ಸೋಮವಾರದಿಂದ ಆರಂಭಗೊಂಡು ದಿನಾಂಕ 09.12.2022ರ ಶುಕ್ರವಾರದ ವರೆಗೆ ನಡೆಯಲಿದೆ. ಯಕ್ಷಗಾನ ಪ್ರದರ್ಶನ 6 ಘಂಟೆಗೆ ಆರಂಭವಾಗಲಿದೆ.
ಈ ಐದು ದಿನಗಳಲ್ಲಿ ಶಿವಪಂಚಾಕ್ಷರಿ ಮಹಿಮೆ, ಕುಮಾರ ವಿಜಯ, ವೇದೋದ್ಧರಣ- ಶ್ರೀನಿವಾಸ ಕಲ್ಯಾಣ, ನಮೋ ರಘುವಂಶದೀಪ ಮತ್ತು ಭಾರತ ಜನನಿ ಎಂಬ ಪ್ರಸಂಗಗಳನ್ನು ಆಡಿ ತೋರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ಕರಪತ್ರವನ್ನು ನೋಡಿ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

