9-12-2022 ರಂದು ಸೀಮಾ ಶುಲ್ಕ, ಬೆಂಗಳೂರು ವಲಯ (customs, bangalore zone) ಸೀಮಾ ಶುಲ್ಕ ಕಾಯಿದೆ 1962, 60 ರ ಸಂಭ್ರಮಾಚರಣೆಯಲ್ಲಿ ಯಕ್ಷದೇಗುಲ ಬೆಂಗಳೂರು ತಂಡದವರಿಂದ ಬಹು ಜನರ ಅಪೇಕ್ಷೆ ಮೇರೆಗೆ 1500ಕ್ಕೂ ಹೆಚ್ಚು ಪ್ರದರ್ಶನ ಕಂಡ “ಇಳೆಯಣ್ಣನ ಕತೆ” ಯಕ್ಷಗಾನ ಪ್ರದರ್ಶನ ನಡೆಯಿತು.
ಹಿರಿಯ ರಂಗಕರ್ಮಿ ಗೋಪಾಲ ಕೃಷ್ಣ ನಾಯರಿ ಯವರು ಹಿಂದಿಯ “ಏಕ್ ಚಿಟ್ಟಿ” ಕಿರು ನಾಟಕವನ್ನು ಕನ್ನಡಕ್ಕೆ ಇಳೆಯಣ್ಣನ ಕತೆ ಎನ್ನುವ ಯಕ್ಷಗಾನ ಪ್ರಸಂಗವಾಗಿ ರಚಿಸಿದರು.
ಪ್ರಸಂಗವನ್ನು ಕೆ.ಮೋಹನ್ ನಿರ್ದೇಶಿಸಿ ಈಗ 1500 ಕ್ಕೂ ಹೆಚ್ಚು ಪ್ರದರ್ಶನ ಕಂಡು ನೂರಾರು ಕಲಾವಿದರು ಈ ಪ್ರಸಂಗದಲ್ಲಿ ವೇಷ ಮಾಡಿರುವುದು ಹೆಮ್ಮೇಯ ವಿಚಾರ. ನಿನ್ನೆಯ ಕಾರ್ಯಕ್ರಮ customs ವಿಚಾರದ ಬಗ್ಗೆ ನಡೆದಿದ್ದು, ಪ್ರಿಯಾಂಕ ಕೆ ಮೋಹನ್ ನಿರ್ದೇಶನ ನೀಡಿ,ಸುದರ್ಶನ ಉರಾಳರು ಸಂಯೋಜನೆ ಮಾಡಿದರು.
ಕಲಾವಿದರಾಗಿ ಸುಬ್ರಹ್ಮಣ್ಯ ಹೊಳ್ಳ, ಕಾರ್ತಿಕ ದಾರೇಶ್ವರ, ಶ್ರೀಧರ,ವಿಶ್ವನಾಥ ಶೆಟ್ಟಿ, ಶಶಾಂಕ ಕಾಶಿ, ಬಾಲಕೃಷ್ಣ ಭಟ್, ತಮ್ಮಣ್ಣ ಗಾಂವ್ಕರ್, ಶ್ರೀವತ್ಸ ಇನ್ನೀತರು ಭಾಗವಹಿಸಿದರು.
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7

