
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಯ್ದ ವಿದ್ಯಾರ್ಥಿ ತಂಡಗಳ ನಡುವೆ ಪ್ರೋ-ಕಬಡ್ಡಿ ಪಂದ್ಯಾಟವು ದಿನಾಂಕ 17 ಡಿಸೆಂಬರ್ ಶನಿವಾರದಂದು ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರಿನ ಶಾಸಕ ಶ್ರೀ ಸಂಜೀವ ಮಠಂದೂರು ಪಂದ್ಯಾಟಕ್ಕೆ ಚಾಲನೆ ನೀಡಲಿದ್ದಾರೆ. ಪುತ್ತೂರಿನ ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಭಾರತೀಯ ಸೀಮಾ ಸುರಕ್ಷಾ ಬಲದ ವಿಶ್ರಾಂತ ಡೆಪ್ಯುಟಿ ಕಮಾಂಡೆಂಟ್ ಡಿ.ಚಂದಪ್ಪ ಮೂಲ್ಯ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಾರೆ.
ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ಗೌರವ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿರುತ್ತಾರೆ.
ಹುಡುಗರ 5 ತಂಡಗಳು ಮತ್ತು ಹುಡುಗಿಯರ 3 ತಂಡಗಳು ಇದರಲ್ಲಿ ಭಾಗವಹಿಸುತ್ತಿದ್ದು, ಮ್ಯಾಟ್ ಅಂಕಣದಲ್ಲಿ ಲೀಗ್ ಮಾದರಿಯಲ್ಲಿ ಈ ಸ್ಪರ್ಧೆಗಳು ನಡೆಯುತ್ತವೆ ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ ಕೆ. ತಿಳಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

