ಪುತ್ತೂರು, ಡಿ 19 : ರಾಜಸ್ತಾನದ ಉದಯಪುರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸಾಗರಿ ಎನ್ ರೈ ಬಾಲಕಿಯರ ವಿಭಾಗದ ಆರ್ಟಿಸ್ಟಿಕ್ ಯೋಗ ಸ್ಫರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಗಳಿಸಿ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ನಡೆಸಲಿರುವ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಈಕೆ ಮೈಸೂರಿನ ನೂತನ್ ಕುಮಾರ್ ಮತ್ತು ಸುಚಿತ್ರಾ ರೈ ದಂಪತಿ ಪುತ್ರಿ.
ಬಾಲಕರ ವಿಭಾಗದ ಆರ್ಟಿಸ್ಟಿಕ್ ವಿಭಾಗದ ಯೋಗ ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ ಜೆ (ಪುತ್ತೂರಿನ ನೆಹರೂನಗರದ ಪಿಎಮ್ಜಿಎಸ್ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ) ದ್ವಿತೀಯ ಸ್ಥಾನ ಗಳಿಸಿದ್ದಾರೆ.
ರಿಧಮಿಕ್ ವಿಭಾಗದ ಯೋಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಮನ್ನಿತ್ ಎನ್ ಗೌಡ (ಬನ್ನೂರಿನ ರಮೇಶ ಗೌಡ ಎನ್ ಮತ್ತು ನಳಿನಿ ದಂಪತಿ ಪುತ್ರ) ತೃತೀಯ ಸ್ಥಾನ ಗಳಿಸಿದ್ದಾರೆ.
ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ