
ಪುತ್ತೂರು, ಡಿ 19 : ರಾಜಸ್ತಾನದ ಉದಯಪುರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸಾಗರಿ ಎನ್ ರೈ ಬಾಲಕಿಯರ ವಿಭಾಗದ ಆರ್ಟಿಸ್ಟಿಕ್ ಯೋಗ ಸ್ಫರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಗಳಿಸಿ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ನಡೆಸಲಿರುವ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಈಕೆ ಮೈಸೂರಿನ ನೂತನ್ ಕುಮಾರ್ ಮತ್ತು ಸುಚಿತ್ರಾ ರೈ ದಂಪತಿ ಪುತ್ರಿ.
ಬಾಲಕರ ವಿಭಾಗದ ಆರ್ಟಿಸ್ಟಿಕ್ ವಿಭಾಗದ ಯೋಗ ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ ಜೆ (ಪುತ್ತೂರಿನ ನೆಹರೂನಗರದ ಪಿಎಮ್ಜಿಎಸ್ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ) ದ್ವಿತೀಯ ಸ್ಥಾನ ಗಳಿಸಿದ್ದಾರೆ.
ರಿಧಮಿಕ್ ವಿಭಾಗದ ಯೋಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಮನ್ನಿತ್ ಎನ್ ಗೌಡ (ಬನ್ನೂರಿನ ರಮೇಶ ಗೌಡ ಎನ್ ಮತ್ತು ನಳಿನಿ ದಂಪತಿ ಪುತ್ರ) ತೃತೀಯ ಸ್ಥಾನ ಗಳಿಸಿದ್ದಾರೆ.
ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

