
ನಿನ್ನೆ ದಿನಾಂಕ 22.12.2022ರ ಗುರುವಾರ ರಾತ್ರಿ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನವೊಂದರಲ್ಲಿ ಕಟೀಲು ಮೇಳದ ಯಕ್ಷಗಾನ ಕಲಾವಿದರೋರ್ವರು ರಂಗಸ್ಥಳದಲ್ಲಿದ್ದಂತೆಯೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.
ಕಟೀಲು ಮೇಳದ ಗುರುವಪ್ಪ ಬಾಯಾರು ಅವರು ಶಿಶುಪಾಲನ ವೇಷದಲ್ಲಿ ರಂಗದಲ್ಲಿ ಪ್ರದರ್ಶನ ನೀಡುತ್ತಿದ್ದರು. ಕಟೀಲಿನ ಸರಸ್ವತಿ ಸದನದಲ್ಲಿ ನಿನ್ನೆ ಕಟೀಲು ನಾಲ್ಕನೇ ಮೇಳದ ಯಕ್ಷಗಾನ ಪ್ರದರ್ಶನ ನಡೆಯುತ್ತಿತ್ತು.
ತ್ರಿಜನ್ಮ ಮೋಕ್ಷ ಆಟದ ಪ್ರದರ್ಶನದ ಮುಕ್ತಾಯದ ಸನ್ನಿವೇಶದಲ್ಲಿ ಅಗ್ರಪೂಜೆ ಪ್ರಸಂಗದಲ್ಲಿ ಭೀಮನ ವೇಷಧಾರಿ ಕುಣಿಯುತ್ತಿದ್ದಾಗ ಶಿಶಿಪಾಲನ ಪಾತ್ರ ವಹಿಸಿದ್ದ ಗುರುವಪ್ಪ ಬಾಯಾರು ಅವರು ಕುಸಿದು ರಂಗಸ್ಥಳದಿಂದ ಕೆಳಕ್ಕೆ ಬಿದ್ದಿದ್ದಾರೆ.
ತಕ್ಷಣ ಅವರನ್ನು ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆ ಮೊದಲೇ ಅವರು ನಿಧನರಾಗಿದ್ದರು ಎಂದು ತಿಳಿದುಬಂದಿದೆ.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

