
ಇತ್ತೀಚಿಗೆ ನಮ್ಮನ್ನಗಲಿದ ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ದಿ| ಕುಂಬಳೆ ಸುಂದರ ರಾವ್ ಅವರ ಆತ್ಮವೃತ್ತಾಂತದ ಕೃತಿಯಾದ ‘ಯಕ್ಷಪಥದ ಯಾತ್ರಿಕ’ ಎಂಬ ಪುಸ್ತಕವು ಅನಾವರಣಗೊಳ್ಳಲಿದೆ.
ಈ ಆತ್ಮಕಥೆಯ ಪುಸ್ತಕ ಬಿಡುಗಡೆ ಸಮಾರಂಭವು ದಿನಾಂಕ 31.12.2022ರ ಶನಿವಾರ ಸಂಜೆ 4 ಘಂಟೆಗೆ ಸರಿಯಾಗಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಎಲ್.ಸಿ.ಆರ್.ಐ ಸಭಾಂಗಣದಲ್ಲಿ ನಡೆಯಲಿದೆ.
ಹಿರಿಯ ಯಕ್ಷಗಾನ ಕಲಾವಿದರಾದ ಶ್ರೀ ಕೆ. ಗೋವಿಂದ ಭಟ್ ಅವರು ಗ್ರಂಥವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಈ ಕಾರ್ಯಕ್ರಮವು ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗ, ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ಮತ್ತು ಕರ್ನಾಟಕ ಸಾಹಿತ್ಯ ಪರಿಷತ್ತು ಬೆಂಗಳೂರು ಇವುಗಳ ಸಹಯೋಗದಲ್ಲಿ ನಡೆಯಲಿದೆ.
ಸಂತ ಅಲೋಶಿಯಸ್ ಕಾಲೇಜಿನ ರೆಕ್ಟರ್ ರೆ.ಫಾ ಮೆಲ್ವಿನ್ ಜೆ.ಪಿಂಟೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಪ್ರೊ| ಬಿ.ಎ ವಿವೇಕ ರೈ ಮತ್ತು ಡಾ. ಎಂ. ಪ್ರಭಾಕರ ಜೋಶಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ‘ಯಕ್ಷಪಥದ ಯಾತ್ರಿಕ’ ದ ಸಂಪಾದಕರೂ, ಸಂತ ಅಲೋಶಿಯಸ್ ಕಾಲೇಜಿನ ನಿವೃತ್ತ ಕನ್ನಡ ಪ್ರೊಫೆಸರ್ ಡಾ. ನಾ. ದಾಮೋದರ ಶೆಟ್ಟಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಆ ಬಳಿಕ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ದಿ। ಕುಂಬಳೆ ಸುಂದರ ರಾಯರ ಅಚ್ಚುಮೆಚ್ಚಿನ ಪ್ರಸಂಗವಾದ ‘ಕೃಷ್ಣ ಸಂಧಾನ’ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

