ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ 40ನೇ ವರ್ಷದ ಬಯಲಾಟವಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತಾ ದಶಾವತಾರ ಯಕ್ಷಗಾನ ಮಂಡಳಿಯಿಂದ ಶ್ರೀದೇವಿ ಮಹಾತ್ಮೆ ಬಯಲಾಟವು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು.
ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಡಾ. ಪ್ರದೀಪ್ ನಾವೂರು ಯಕ್ಷಗಾನ ಒಂದು ಅಪೂರ್ವ ಕಲಾ ಪ್ರಕಾರವಾಗಿ ಬೆಳೆಯುವಲ್ಲಿ ಕೊಡುಗೆಗಳನ್ನು ನೀಡಿದ ಹಿರಿಯ ಕಲಾವಿದರ ಮತ್ತು ಸಂಘಟಕರ ನಿಸ್ವಾರ್ಥ ಸೇವೆಯನ್ನು ಸ್ಮರಿಸಿದರು.
ಮುಖ್ಯ ಅತಿಥಿಯಾಗಿದ್ದ ದಿವಾಕರ್ ಆಚಾರ್ಯ ಗೇರುಕಟ್ಟೆ ಮಾತನಾಡಿ ಮನೋರಂಜನೆಯೊಂದಿಗೆ ಜೀವನಕ್ಕೆ ಮಾರ್ಗದರ್ಶಕವಾಗುವ ಧಾರ್ಮಿಕ ಸಂದೇಶವನ್ನು ಯಕ್ಷಗಾನವು ನಿತ್ಯವೂ ನೀಡುತ್ತಾ ಇದೆ ಎಂದರು.
ಕಟೀಲು ಆರನೇ ಮೇಳದ ಪ್ರಬಂಧಕ ಮತ್ತು ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ಇವರನ್ನು ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು ಹೆಚ್. ಪದ್ಮ ಕುಮಾರ್ ಅಭಿನಂದನಾ ನುಡಿಗಳ ನ್ನಾಡಿದರು.
ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಡಾ.ಕೆ.ಜಿ ಪಣಿಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಿತಿ ಅಧ್ಯಕ್ಷರಾದ ಸದಾಶಿವ ಶೆಟ್ಟಿ ಸ್ವಾಗತಿಸಿ ಸಂಚಾಲಕರಾದ ಗಣೇಶ ಐತಾಳ್ ವಂದಿಸಿದರು. ಸುರೇಶ್ ಶೆಟ್ಟಿ ಲಾಯಿಲ ವಂದಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

