ಯಕ್ಷಗಾನ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆಗಳನ್ನು ಕೈಗೊಂಡು ಜನ ಮನ್ನಣೆಗಳಿಸಿದ ಬೆಂಗಳೂರಿನ ಯಕ್ಷಕಲಾ ಅಕಾಡೆಮಿ, ರಾಜ್ಯದ ಹಲವು ಭಾಗಗಳಲ್ಲಿ ಯಕ್ಷಗಾನ ಉತ್ಸವವನ್ನು ಕೈಗೊಂಡಿದೆ.
ಅಂತೆಯೇ ಇದೀಗ ಮಾರ್ಚ್ ತಿಂಗಳ ಯಕ್ಷಗಾನ ಉತ್ಸವವು ಸಾಸ್ತನ ಯಡಬೆಟ್ಟಿನ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ , ದಿನಾಂಕ 19-03-2022ರ ಸಂಜೆ 6.00ಕ್ಕೆ ಕರ್ಣಾರ್ಜುನ ಕಾಳಗ ಎಂಬ ಯಕ್ಷಗಾನದ ಮೂಲಕ ಸಂಪನ್ನಗೊಳ್ಳಲಿದೆ.
ಕೋಟ ವಿವೇಕ ಆಂಗ್ಲ ಮಾಧ್ಯಮದ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ರಾಮದೇವ ಐತಾಳ, ಉಪನ್ಯಾಸಕ ಶ್ರೀ ಸುಜಯೀಂದ್ರ ಹಂದೆ, ಯಕ್ಷಗಾನ ಪ್ರೋತ್ಸಾಹಕರಾದ ವೇದಮೂರ್ತಿ ಶ್ರೀ ವೆಂಕಪ್ಪಯ್ಯ ಭಟ್ಟ, ಯಕ್ಷಗಾನ ಕಲಾವಿದರಾದ ಡಾ| ವೈಕುಂಠ ಹೇರ್ಳೆಯವರು ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.
ಕೃಷ್ಣಮೂರ್ತಿ ತುಂಗ, ಚಿತ್ಕಲಾ ಕೆ. ತುಂಗಾ, ಉದಯ ಹೊಸಾಳ, ರಾಘವೇಂದ್ರ ಹೆಗಡೆ, ರಾಮಕೃಷ್ಣ ಮಂದರ್ತಿ, ಸುಜಯೀಂದ್ರ ಹಂದೆ, ವಾಗ್ವಿಲಾಸ ಭಟ್ಟ, ಶಶಾಂಕ, ಶಶಿರಾಜ ಸೋಮಯಾಜಿ, ಸುಹಾಸ ಕರಬ, ಆದಿತ್ಯ ಹೊಳ್ಳ, ಸದಾಶಿವ ತುಂಗ, ಮುಂತಾದ ಕಲಾವಿದರು ಭಾಗವಹಿಸಲಿದ್ದಾರೆ ಎಂದು ಕಾರ್ಯದರ್ಶಿ ಕೆ. ಅನುಸೂಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

