ಯಕ್ಷಗಾನ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆಗಳನ್ನು ಕೈಗೊಂಡು ಜನ ಮನ್ನಣೆಗಳಿಸಿದ ಬೆಂಗಳೂರಿನ ಯಕ್ಷಕಲಾ ಅಕಾಡೆಮಿ, ರಾಜ್ಯದ ಹಲವು ಭಾಗಗಳಲ್ಲಿ ಯಕ್ಷಗಾನ ಉತ್ಸವವನ್ನು ಕೈಗೊಂಡಿದೆ.
ಅಂತೆಯೇ ಇದೀಗ ಮಾರ್ಚ್ ತಿಂಗಳ ಯಕ್ಷಗಾನ ಉತ್ಸವವು ಸಾಸ್ತನ ಯಡಬೆಟ್ಟಿನ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ , ದಿನಾಂಕ 19-03-2022ರ ಸಂಜೆ 6.00ಕ್ಕೆ ಕರ್ಣಾರ್ಜುನ ಕಾಳಗ ಎಂಬ ಯಕ್ಷಗಾನದ ಮೂಲಕ ಸಂಪನ್ನಗೊಳ್ಳಲಿದೆ.
ಕೋಟ ವಿವೇಕ ಆಂಗ್ಲ ಮಾಧ್ಯಮದ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ರಾಮದೇವ ಐತಾಳ, ಉಪನ್ಯಾಸಕ ಶ್ರೀ ಸುಜಯೀಂದ್ರ ಹಂದೆ, ಯಕ್ಷಗಾನ ಪ್ರೋತ್ಸಾಹಕರಾದ ವೇದಮೂರ್ತಿ ಶ್ರೀ ವೆಂಕಪ್ಪಯ್ಯ ಭಟ್ಟ, ಯಕ್ಷಗಾನ ಕಲಾವಿದರಾದ ಡಾ| ವೈಕುಂಠ ಹೇರ್ಳೆಯವರು ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.
ಕೃಷ್ಣಮೂರ್ತಿ ತುಂಗ, ಚಿತ್ಕಲಾ ಕೆ. ತುಂಗಾ, ಉದಯ ಹೊಸಾಳ, ರಾಘವೇಂದ್ರ ಹೆಗಡೆ, ರಾಮಕೃಷ್ಣ ಮಂದರ್ತಿ, ಸುಜಯೀಂದ್ರ ಹಂದೆ, ವಾಗ್ವಿಲಾಸ ಭಟ್ಟ, ಶಶಾಂಕ, ಶಶಿರಾಜ ಸೋಮಯಾಜಿ, ಸುಹಾಸ ಕರಬ, ಆದಿತ್ಯ ಹೊಳ್ಳ, ಸದಾಶಿವ ತುಂಗ, ಮುಂತಾದ ಕಲಾವಿದರು ಭಾಗವಹಿಸಲಿದ್ದಾರೆ ಎಂದು ಕಾರ್ಯದರ್ಶಿ ಕೆ. ಅನುಸೂಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ