ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಸಿಬಿಎಸ್ಇ ಶಿಕ್ಷಣ ಸಂಸ್ಥೆಯಾದ ಅಂಬಿಕಾ ವಿದ್ಯಾಲಯ ಹೊಸತನ ಹಾಗೂ ವಿನೂತನ ಕಲ್ಪನೆಗಳ ಸಾಕಾರಕೇಂದ್ರವೆನಿಸಿದೆ. ಪುತ್ತೂರಿನ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಮೊದಲುಗಳನ್ನು ಈ ಸಂಸ್ಥೆ ಹುಟ್ಟುಹಾಕಿದೆ. ಪುತ್ತೂರು ತಾಲೂಕಿನಲ್ಲಿನ ಶಿಕ್ಷಣ ಸಂಸ್ಥೆಗಳ ಪೈಕಿ ಈಜು ಕೊಳ ಹೊಂದಿರುವ ಏಕೈಕ ಶಿಕ್ಷಣ ಸಂಸ್ಥೆ ಅಂಬಿಕಾ ವಿದ್ಯಾಲಯ. ಅಂತೆಯೇ ನಿಗದಿತ ಪಠ್ಯದೊಂದಿಗೆ ವಿದ್ಯಾರ್ಥಿಗಳಿಗೆ ಜೀವನ ಶಿಕ್ಷಣ ಕೊಡುವ, ಬದುಕಿನ ಅನುಭವ ಕಟ್ಟಿಕೊಡುವ ಕಾರ್ಯದಲ್ಲೂ ಅಂಬಿಕಾ ಸಂಸ್ಥೆ ತೊಡಗಿಕೊಂಡಿದೆ. ಹಾಗಾಗಿ ಇಲ್ಲಿ ಎಲ್.ಕೆ.ಜಿ ತರಗತಿಗೆ ದಾಖಲಾತಿ ಹೊಂದುವ ವಿದ್ಯಾರ್ಥಿಯೊಬ್ಬ ಆ ವರ್ಷದಿಂದಲೇ ಜೀವನ ಶಿಕ್ಷಣವನ್ನೂ ಕರಗತ ಮಾಡಿಕೊಳ್ಳುತ್ತಾನೆ ಎಂಬುದು ವಿಶೇಷ.
ಧಾರ್ಮಿಕ ಚಿಂತನೆ, ಶೈಕ್ಷಣಿಕ ಸಾಧನೆ ಮತ್ತು ರಾಷ್ಟçಭಕ್ತಿ ಉದ್ದೀಪನಗೊಳಿಸುವ ಸಮಗ್ರ ಶಿಕ್ಷಣವನ್ನು ದಶಕದ ಹಿಂದಿನಿ0ದಲೇ ಜಾರಿಗೊಳಿಸಿರುವ ಅಂಬಿಕಾ ವಿದ್ಯಾಲಯ ಮುಂದಿನ ದಿನಗಳಲ್ಲಿ ವಿಜ್ಞಾನ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ವಿದ್ಯಾರ್ಥಿಗಳನ್ನು ತಯಾರು ಮಾಡುವ, ತನ್ಮೂಲಕ ವೈಜ್ಞಾನಿಕ ರಂಗದಲ್ಲಿ ತನ್ನ ಛಾಪನ್ನೊತ್ತುವ ನೆಲೆಯಲ್ಲಿ ನೂತನ ಕಾರ್ಯಯೋಜನೆ ಹಮ್ಮಿಕೊಂಡಿದೆ.
ಆ ನೆಲೆಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ಸಂಸ್ಥೆಯಲ್ಲಿ ರೋಬೋಟಿಕ್ಸ್ ಹಾಗೂ ಆರ್ಟಿಫಿಶಿಯಲ್ ಇಂಟಲಿಜೆನ್ಸ್ (ಕೃತಕ ಬುದ್ಧಿಮತ್ತೆ) ಅನ್ನು ವಿದ್ಯಾರ್ಥಿಗಳಿಗೆ ಕಲಿಸಿಕೊಡುವ ನಿರ್ಣಯ ಕೈಗೊಳ್ಳಲಾಗಿದೆ. ಪುತ್ತೂರಿನಲ್ಲಿ ಮೊತ್ತಮೊದಲ ಬಾರಿಗೆ ವಿದ್ಯಾಲಯವೊಂದರಲ್ಲಿ ಇಂತಹದ್ದೊ0ದು ಕಲಿಕೆ ಆರಂಭಗೊಳ್ಳುತ್ತಿದೆ.
ವಿದ್ಯಾರ್ಥಿಗಳಿಗೆ ಏನು ಲಾಭ? :
ರೋಬೋಟಿಕ್ಸ್ ಹಾಗೂ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಈಗ ಸಾಕಷ್ಟು ಪ್ರವರ್ಧಮಾನಕ್ಕೆ ಬರುತ್ತಿದ್ದು ವೈಜ್ಞಾನಿಕ ಕ್ಷೇತ್ರದಲ್ಲಿ ಸದ್ದು ಮಾಡುತ್ತಿವೆ. ಮುಂದಿನ ದಿನಗಳಲ್ಲಿ ವಿಜ್ಞಾನ ಕ್ಷೇತ್ರ ಈ ಎರಡು ಸಂಗತಿಗಳ ನೆಲೆಯಲ್ಲಿಯೇ ಬೆಳೆದುಬರಲಿದೆ. ಈಗಾಗಲೇ ಇಂಜಿನಿಯರಿ0ಗ್ ನ0ತಹ ಕಾಲೇಜುಗಳಲ್ಲಿ ಈ ವಿಷಯದಲ್ಲೇ ಪದವಿ ಶಿಕ್ಷಣ ಕೈಗೆತ್ತಿಕೊಳ್ಳಲಾಗಿದ್ದು ಅನೇಕ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಹಾಗೂ ಅಪಾರ ಬೇಡಿಕೆ ಈ ಕ್ಷೇತ್ರಕ್ಕಿದೆ.
ಜತೆಗೆ, ಇದು ವಿದ್ಯಾರ್ಥಿಗಳಲ್ಲಿ ಎಳವೆಯಿಂದಲೇ ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ಪೂರಕವಾಗಲಿದೆ. ಕಂಪ್ಯೂಟರ್ ಚಿಪ್ಸ್ ತಯಾರಿ, ರೋಬೋಟ್ ನಿರ್ಮಾಣದಂತಹ ಕಾರ್ಯಗಳನ್ನು ಈವರೆಗೆ ಇಂಜಿನಿಯರಿ0ಗ್ ಓದುತ್ತಿರುವ ಅಥವ ಓದಿದ ವಿದ್ಯಾರ್ಥಿಗಳು ಕೈಗೆತ್ತಿಕೊಳ್ಳುವ ಸಂದರ್ಭವಿದ್ದರೆ ಇನ್ನು ಮುಂದೆ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಅಂತಹ ಮಾರ್ಗದರ್ಶನ, ಪ್ರೇರಣೆ ದೊರಕಲಿದೆ. ಮನೆಯಲ್ಲಿಯೇ ವಿವಿಧ ಬಗೆಯ ನ್ಯಾನೋ ತಂತ್ರಜ್ಞಾನ ಹಾಗೂ ರೋಬೋಟಿಕ್ ತಂತ್ರಜ್ಞಾನವನ್ನು ರೂಪಿಸುವ ಕಲೆ ವಿದ್ಯಾರ್ಥಿಗಳಿಗೆ ಸಿದ್ಧಿಸಲಿದೆ. ಇದರಿಂದಾಗಿ ವಿಜ್ಞಾನ ಕ್ಷೇತ್ರಕ್ಕೆ ಅಂಬಿಕಾ ವಿದ್ಯಾಲಯ ಹೆಚ್ಚಿನ ಕೊಡುಗೆ ನೀಡಲು ಸಾಧ್ಯವಾಗುವುದಲ್ಲದೆ ವಿದ್ಯಾರ್ಥಿಗಳನ್ನು ವಿಜ್ಞಾನಿಗಳನ್ನಾಗಿ ಪರಿವರ್ತಿಸುವ ಕಾರ್ಯ ಈ ತರಬೇತಿಯಿಂದ ನಡೆಯಲಿದೆ.
ಇದಲ್ಲದೆ ತಮ್ಮ ಮುಂದಿನ ಶಿಕ್ಷಣದ ಸಂದರ್ಭದಲ್ಲಿ ರೋಬೋಟಿಕ್ಸ್ ಹಾಗೂ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ವಿಷಯಗಳನ್ನು ಆಯ್ಕೆ ಮಾಡುವ ವಿದ್ಯಾರ್ಥಿಗಳಿಗೆ ಆ ಅಧ್ಯಯನ ಸುಲಭ ಸಾಧ್ಯವಾಗಲಿದೆ. ಅಂಬಿಕಾ ವಿದ್ಯಾಲಯದಲ್ಲಿ ಈ ತರಬೇತಿಯನ್ನು ಪಡೆದಿರುವುದು ಅವರ ಭವಿಷ್ಯಕ್ಕೆ ಬಹುದೊಡ್ಡ ಪ್ರಯೋಜನವನ್ನೊದಗಿಸಲಿದೆ.
ದೇಶಕ್ಕೂ ಇದೆ ಪ್ರಯೋಜನ:
ಇಂದು ನ್ಯಾನೋ ತಂತ್ರಜ್ಞಾನದಲ್ಲಿ ಚೀನಾ ಇಡಿಯ ಪ್ರಪಂಚದಲ್ಲೇ ಪ್ರಭುತ್ವವನ್ನು ಸಾಧಿಸಲು ಹೊರಟಿದೆ. ಯಾವುದೇ ವಸ್ತುಗಳ ತಯಾರಿಕೆ, ಅದರ ನ್ಯಾನೋ ಭಾಗಗಳ ಸಿದ್ಧಪಡಿಸುವಿಕೆಯಲ್ಲಿ ಚೀನಾ ಮೇಲುಗೈ ಎನಿಸುತ್ತಿದೆ. ಈ ವಿಚಾರವನ್ನು ನಾವು ಲಘುವಾಗಿ ಪರಿಗಣಿಸಿದಲ್ಲಿ ಮುಂದಿನ ದಿನಗಳಲ್ಲಿ ಚೀನಾದ ತಾಂತ್ರಿಕ ದಾಸ್ಯಕ್ಕೆ ಪ್ರಪಂಚವೇ ಒಳಗಾಗಬೇಕಾದ ಅಪಾಯವಿದೆ.
ಇಂತಹ ಸಂದರ್ಭದಲ್ಲಿ ಚೀನಾಕ್ಕೆ ಸಡ್ಡು ಹೊಡೆಯುವ ಬುದ್ಧಿಮತ್ತೆ ಮತ್ತು ಸಾಧ್ಯತೆ ಭಾರತಕ್ಕಷ್ಟೇ ಇದೆ ಎಂಬುದು ಜಗತ್ತಿಗೇ ತಿಳಿದಿದೆ ಹಾಗೂ ಭಾರತದಿಂದ ನಿರೀಕ್ಷೆ ಸಾಕಷ್ಟಿದೆ. ಹಾಗಾಗಿ ನಮ್ಮ ಮಕ್ಕಳನ್ನು ಎಳವೆಯಿಂದಲೇ ರೂಪಿಸಲು ಅಂಬಿಕಾ ವಿದ್ಯಾಲಯ ಸಜ್ಜಾಗಿದೆ. ದೇಶ ಮೊದಲು ಎಂಬ ಕಲ್ಪನೆಯಡಿ ಶಿಕ್ಷಣದ ಪ್ರಸರಣದಲ್ಲಿ ತೊಡಗಿರುವ ಅಂಬಿಕಾ ವಿದ್ಯಾಲಯ ಇದೀಗ ಆಧುನಿಕ ತಂತ್ರಜ್ಞಾನ ಆಧಾರಿತ ಶಿಕ್ಷಣದೊಂದಿಗೆ ಅದಕ್ಕೆ ಪೂರಕವಾದ ಮತ್ತೊಂದು ಮಹತ್ತರ ಹೆಜ್ಜೆಯನ್ನಿರಿಸಿದೆ.
ಇಂಟರಾಕ್ಟಿವ್ ಸ್ಮಾರ್ಟ್ ಬೋರ್ಡ್:
ವಿದ್ಯಾರ್ಥಿಗಳ ಅಧ್ಯಯನ ಸಾಧ್ಯತೆಯನ್ನು ವಿಸ್ತರಿಸುವುದಕ್ಕಾಗಿ ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಇಂರ್ಯಾಕ್ಟಿವ್ ಸ್ಮಾರ್ಟ್ ಬೋಡ್ಗಳನ್ನು ಅಳವಡಿಸಲಾಗುತ್ತಿದೆ. ಇಂತಹ ಒಂದು ಸ್ಮಾಟ್ ಬೋರ್ಡ್ಗೆ ಸುಮಾರು 1 ಲಕ್ಷದ 75 ಸಾವಿರ ರೂಪಾಯಿಗಿಂತಲೂ ಅಧಿಕ ಬೆಲೆಯಿದೆ. ಈ ಬೋರ್ಡ್ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಮೂಲಕ ಕಾರ್ಯ ನಿರ್ವಹಿಸುತ್ತಿದ್ದು, 3 ಡಿ ತಂತ್ರಜ್ಞಾನ, 4 ಕೆ ರೆಸಲ್ಯೂಶನ್ ಜತೆಗೆ ಅತ್ಯಂತ ಆಧುನಿಕ ಇಂರ್ಯಾಕ್ಟಿವ್ ತಂತ್ರಜ್ಞಾನ ಹೊಂದಿದೆ. ಇದರಿಂದಾಗಿ ವಿದ್ಯಾರ್ಥಿಗಳ ಕಲಿಕಾ ಮತ್ತು ಗ್ರಹಿಕಾ ಸಾಮರ್ಥ್ಯ ಗಣನೀಯವಾಗಿ ಹೆಚ್ಚಾಗಲಿದ್ದು, ಪಠ್ಯವನ್ನು ಸುಲಲಿತವಾಗಿ ಅರ್ಥ ಮಾಡಿಕೊಳ್ಳುವಲ್ಲಿ ಈ ಬೋರ್ಡ್ ಉಪಯುಕ್ತವೆನಿಸಲಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

