ಕನ್ನಡ ಶ್ರೇಷ್ಠ ಕವಿಗಳಲ್ಲೊಬ್ಬರಾದ ದಿ. ಸುಬ್ಬಣ್ಣ ರಂಗನಾಥ ಎಕ್ಕುಂಡಿ ಅವರ ಜನ್ಮಶತಮಾನೋತ್ಸವ ಪ್ರಯುಕ್ತ ಧಾರವಾಡದ ಸಾಹಿತ್ಯ ಗಂಗಾ ಮತ್ತು ಹಂಸಭಾವಿಯ ವಾರಂಬಳ್ಳಿ ಪ್ರತಿಷ್ಠಾನದ ಸಹಯೋಗದಲ್ಲಿ ನೀಡಲಾಗುತ್ತಿರುವ ‘ಸು. ರಂ. ಎಕ್ಕುಂಡಿ ಜನ್ಮ ಶತಮಾನೋತ್ಸವ ಕಾವ್ಯ ಪ್ರಶಸ್ತಿ – 2023’ಕ್ಕೆ ಶ್ರೀ ವಾಸುದೇವ ನಾಡಿಗರ ‘ಬಂದರಿಗೆ ಬಂದ ಹಡಗು’ ಮತ್ತು ಡಾ. ರತ್ನಾಕರ ಕುನಗೋಡು ಅವರ ‘ಎದೆನೆಲದ ಕಾವು’ ಕವನ ಸಂಕಲನಗಳು ಆಯ್ಕೆಯಾಗಿವೆ.
ತೀರ್ಪುಗಾರರಾದ ಡಾ. ಸಂಕೇತ ಪಾಟೀಲ, ಡಾ. ಸುಭಾಷ್ ಪಟ್ಟಾಜೆ ಮತ್ತು ಡಾ. ರವಿಶಂಕರ ಜಿ. ಕೆ. ಈ ಎರಡು ಕೃತಿಗಳನ್ನು ಆಯ್ಕೆ ಮಾಡಿದ್ದಾರೆ.
ಇದೇ ಏಪ್ರಿಲ್ 16ರಂದು ಧಾರವಾಡದ ರಂಗಾಯಣದಲ್ಲಿ ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ ಕನ್ನಡದ ಪ್ರಸಿದ್ಧ ಸಾಹಿತಿ ಪ್ರೊ. ರಾಘವೇಂದ್ರ ಪಾಟೀಲರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಈ ಪ್ರಶಸ್ತಿ 5000 ರೂಪಾಯಿಗಳ ನಗದು, ಸನ್ಮಾನ ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತದೆ ಎಂದು ಸಾಹಿತ್ಯ ಗಂಗಾ ಪ್ರತಿಷ್ಠಾನದ ಮುಖ್ಯಸ್ಥರಾದ ವಿಕಾಸ ಹೊಸಮನಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮದರಸಾದಲ್ಲಿ ಉರ್ದು ಕಲಿಸುತ್ತಿದ್ದ ಶಿಕ್ಷಕ
- 50 ವರ್ಷಗಳ ನಂತರ ಮತ್ತೆ ಅವಾಂತರ ಸೃಷ್ಟಿಸಿದ ‘ಕೋಸಿ’ ನದಿ – ಉತ್ತರ ಬಿಹಾರ ಪ್ರವಾಹದಲ್ಲಿ ಮುಳುಗಡೆಯಾಗುವ ಭೀತಿ, ಮನೆ ಬಿಟ್ಟು ಹೋಗುತ್ತಿರುವ ಜನ
- ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ 15 ಲಕ್ಷ ರೂಪಾಯಿಗಳ ಕೊಡುಗೆ
- ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ – ಇಸ್ರೇಲ್ ಅಧಿಕೃತ ಹೇಳಿಕೆ
- ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ಪುತ್ತೂರಿನಲ್ಲಿ ದೂರು ದಾಖಲು – ಹಿಂದೂ ಧರ್ಮಕ್ಕೆ ಅವಮಾನ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ