ಕನ್ನಡ ಶ್ರೇಷ್ಠ ಕವಿಗಳಲ್ಲೊಬ್ಬರಾದ ದಿ. ಸುಬ್ಬಣ್ಣ ರಂಗನಾಥ ಎಕ್ಕುಂಡಿ ಅವರ ಜನ್ಮಶತಮಾನೋತ್ಸವ ಪ್ರಯುಕ್ತ ಧಾರವಾಡದ ಸಾಹಿತ್ಯ ಗಂಗಾ ಮತ್ತು ಹಂಸಭಾವಿಯ ವಾರಂಬಳ್ಳಿ ಪ್ರತಿಷ್ಠಾನದ ಸಹಯೋಗದಲ್ಲಿ ನೀಡಲಾಗುತ್ತಿರುವ ‘ಸು. ರಂ. ಎಕ್ಕುಂಡಿ ಜನ್ಮ ಶತಮಾನೋತ್ಸವ ಕಾವ್ಯ ಪ್ರಶಸ್ತಿ – 2023’ಕ್ಕೆ ಶ್ರೀ ವಾಸುದೇವ ನಾಡಿಗರ ‘ಬಂದರಿಗೆ ಬಂದ ಹಡಗು’ ಮತ್ತು ಡಾ. ರತ್ನಾಕರ ಕುನಗೋಡು ಅವರ ‘ಎದೆನೆಲದ ಕಾವು’ ಕವನ ಸಂಕಲನಗಳು ಆಯ್ಕೆಯಾಗಿವೆ.
ತೀರ್ಪುಗಾರರಾದ ಡಾ. ಸಂಕೇತ ಪಾಟೀಲ, ಡಾ. ಸುಭಾಷ್ ಪಟ್ಟಾಜೆ ಮತ್ತು ಡಾ. ರವಿಶಂಕರ ಜಿ. ಕೆ. ಈ ಎರಡು ಕೃತಿಗಳನ್ನು ಆಯ್ಕೆ ಮಾಡಿದ್ದಾರೆ.
ಇದೇ ಏಪ್ರಿಲ್ 16ರಂದು ಧಾರವಾಡದ ರಂಗಾಯಣದಲ್ಲಿ ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ ಕನ್ನಡದ ಪ್ರಸಿದ್ಧ ಸಾಹಿತಿ ಪ್ರೊ. ರಾಘವೇಂದ್ರ ಪಾಟೀಲರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಈ ಪ್ರಶಸ್ತಿ 5000 ರೂಪಾಯಿಗಳ ನಗದು, ಸನ್ಮಾನ ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತದೆ ಎಂದು ಸಾಹಿತ್ಯ ಗಂಗಾ ಪ್ರತಿಷ್ಠಾನದ ಮುಖ್ಯಸ್ಥರಾದ ವಿಕಾಸ ಹೊಸಮನಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

