ಕನ್ನಡ ಶ್ರೇಷ್ಠ ಕವಿಗಳಲ್ಲೊಬ್ಬರಾದ ದಿ. ಸುಬ್ಬಣ್ಣ ರಂಗನಾಥ ಎಕ್ಕುಂಡಿ ಅವರ ಜನ್ಮಶತಮಾನೋತ್ಸವ ಪ್ರಯುಕ್ತ ಧಾರವಾಡದ ಸಾಹಿತ್ಯ ಗಂಗಾ ಮತ್ತು ಹಂಸಭಾವಿಯ ವಾರಂಬಳ್ಳಿ ಪ್ರತಿಷ್ಠಾನದ ಸಹಯೋಗದಲ್ಲಿ ನೀಡಲಾಗುತ್ತಿರುವ ‘ಸು. ರಂ. ಎಕ್ಕುಂಡಿ ಜನ್ಮ ಶತಮಾನೋತ್ಸವ ಕಾವ್ಯ ಪ್ರಶಸ್ತಿ – 2023’ಕ್ಕೆ ಶ್ರೀ ವಾಸುದೇವ ನಾಡಿಗರ ‘ಬಂದರಿಗೆ ಬಂದ ಹಡಗು’ ಮತ್ತು ಡಾ. ರತ್ನಾಕರ ಕುನಗೋಡು ಅವರ ‘ಎದೆನೆಲದ ಕಾವು’ ಕವನ ಸಂಕಲನಗಳು ಆಯ್ಕೆಯಾಗಿವೆ.
ತೀರ್ಪುಗಾರರಾದ ಡಾ. ಸಂಕೇತ ಪಾಟೀಲ, ಡಾ. ಸುಭಾಷ್ ಪಟ್ಟಾಜೆ ಮತ್ತು ಡಾ. ರವಿಶಂಕರ ಜಿ. ಕೆ. ಈ ಎರಡು ಕೃತಿಗಳನ್ನು ಆಯ್ಕೆ ಮಾಡಿದ್ದಾರೆ.
ಇದೇ ಏಪ್ರಿಲ್ 16ರಂದು ಧಾರವಾಡದ ರಂಗಾಯಣದಲ್ಲಿ ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ ಕನ್ನಡದ ಪ್ರಸಿದ್ಧ ಸಾಹಿತಿ ಪ್ರೊ. ರಾಘವೇಂದ್ರ ಪಾಟೀಲರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಈ ಪ್ರಶಸ್ತಿ 5000 ರೂಪಾಯಿಗಳ ನಗದು, ಸನ್ಮಾನ ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತದೆ ಎಂದು ಸಾಹಿತ್ಯ ಗಂಗಾ ಪ್ರತಿಷ್ಠಾನದ ಮುಖ್ಯಸ್ಥರಾದ ವಿಕಾಸ ಹೊಸಮನಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

