ಧಾರವಾಡದ ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆಯು ನೀಡುವ 2022ನೇ ಸಾಲಿನ ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿಯು ಮಹಾಂತೇಶ ನವಲಕಲ್ ಅವರ ‘ಬುದ್ಧಗಂಟೆಯ ಸದ್ದು ಮತ್ತು ಇತರೆ ಕತೆಗಳು’ ಹಾಗೂ ಶ್ರೀಲೋಲ ಸೋಮಯಾಜಿಯವರ ‘ನ ಪ್ರಮದಿತವ್ಯಂ’ ಎಂಬ ಕಥಾಸಂಕಲನಗಳ ಹಸ್ತಪ್ರತಿಗಳಿಗೆ ದೊರತಿದೆ.
ಕನ್ನಡದ ಖ್ಯಾತ ವಿಮರ್ಶಕ ಪ್ರೊ. ಟಿ. ಪಿ. ಅಶೋಕ ಮತ್ತು ಖ್ಯಾತ ಕಥೆಗಾರ ಡಾ. ಕೆ. ಸತ್ಯನಾರಾಯಣ ಅವರು ತೀರ್ಪುಗಾರರಾಗಿದ್ದು ಸರ್ವಾನುಮತದಿಂದ ಈ ಹಸ್ತಪ್ರತಿಗಳನ್ನು ಆಯ್ಕೆ ಮಾಡಿದ್ದಾರೆ. ಈ ಪ್ರಶಸ್ತಿ 20000=00 ರೂ. ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನ ಒಳಗೊಂಡಿರುತ್ತದೆ.
ಎಪ್ರಿಲ್ 16ರಂದು ಧಾರವಾಡದ ರಂಗಾಯಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಖ್ಯಾತ ಕವಿ ಡಾ. ಎಚ್. ಎಸ್. ವೆಂಕಟೇಶ ಮೂರ್ತಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆಯ ಸಂಚಾಲಕ ವಿಕಾಸ ಹೊಸಮನಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
