ಶ್ರೀ ಬಾಲಸುಬ್ರಮಣ್ಯ ಸ್ವಾಮಿ ದೇವಾಲಯ ಇಚ್ಚುರೂ ಕಾಲಾವಧಿ ಉತ್ಸವದ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ‘ದೇವಸೇನಾನೀ’ ತಾಳಮದ್ದಳೆ ಜರಗಿತು.

ಭಾಗವತರಾಗಿ ಭರತರಾಜ್ ಶೆಟ್ಟಿ ಸಿದ್ದಕಟ್ಟೆ, ನೀತೇಶ್ ಕುಮಾರ್, ಹಿಮ್ಮೇಳದಲ್ಲಿ ಲಕ್ಷ್ಮೀಶ ಅಮ್ಮಣ್ಣಾಯ, ಶ್ರೀಪತಿ ಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣ್ಣಾಯ, ತೇಜಸ್ ಬಲ್ಲಾಲ್ ಕೌಡಂಬಾಡಿ ಭಾಗವಹಿಸಿದ್ದರು.


ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ(ದೇವೇಂದ್ರ) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ(ಈಶ್ವರ) , ಗುಡ್ದಪ್ಪ ಬಲ್ಯ (ತಾರಕಾಸುರ) ಹರೀಶ್ ಆಚಾರ್ಯ ಬಾರ್ಯ(ಮನ್ಮಥ), ಶ್ರೀಮತಿ ಪೂರ್ಣಿಮಾ ಎಸ್. ಪುತ್ತೂರಾಯ (ಪಾರ್ವತಿ) ಶ್ರೀಮತಿ ಜ್ಯೋತಿ ಶೈಲೇಶ್ (ಷಣ್ಮುಖ) ಭಾಗವಹಿಸಿದ್ದರು.
ಶ್ರೀ ಸುರೇಶ್ ಪುತ್ತೂರಾಯ ಸ್ವಾಗತಿಸಿ ವಂದಿಸಿದರು. ಸುರೇಶ್ ಪುತ್ತೂರಾಯ, ಲಕ್ಷ್ಮೀಶ ಅಮ್ಮಣ್ಣಾಯ, ಪಿ. ಸೂರ್ಯನಾರಾಯಣ ಪುತ್ತೂರಾಯ, ಜಯಪ್ರಸಾದ್ ಯೆನ್ಮಾಡಿ ಕಲಾವಿದರನ್ನು ಶಾಲು, ಪ್ರಸಾದ ನೀಡಿ ಗೌರವಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

