ತನ್ನನ್ನು ಎಚ್ಚರಿಸಲು ತಡವಾದ ಕಾರಣಕ್ಕೆ ಯುವಕನೊಬ್ಬ ತಂದೆಯನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಕೇರಳದ ತ್ರಿಶೂರ್ ಜಿಲ್ಲೆಯ ಕೊಡನ್ನೂರು ಅರಿಯಂಪದಂ ಮೂಲದ ಜಾಯ್ (60) ಎಂದು ಗುರುತಿಸಲಾಗಿದೆ.

ತಂದೆಯನ್ನು ಕೊಂದದ್ದಕ್ಕಾಗಿ ಪೊಲೀಸರು ಜಾಯ್ ಅವರ ಪುತ್ರ ರಿಜೋ(25)ನನ್ನು ವಶಕ್ಕೆ ಪಡೆದಿದ್ದಾರೆ.

ವೆಲ್ಡಿಂಗ್ ಕೆಲಸಗಾರನಾಗಿದ್ದ ರಿಜೋ ಸಂಜೆ 5 ಗಂಟೆ ಸುಮಾರಿಗೆ ಕುಡಿದ ಅಮಲಿನಲ್ಲಿ ಮನೆಗೆ ಬಂದಿದ್ದಾನೆ. ಮಲಗಲು ತೆರಳುವ ಮುನ್ನ ರಾತ್ರಿ 8.15ಕ್ಕೆ ತನ್ನನ್ನು ಎಬ್ಬಿಸುವಂತೆ ಪೋಷಕರಿಗೆ ಹೇಳಿ ಮಲಗಿದ್ದ.
ಆದರೆ ಸರಿಯಾದ ಸಮಯದ ಹದಿನೈದು ನಿಮಿಷದ ನಂತರ ಅಂದರೆ ರಾತ್ರಿ 8.30ರ ವೇಳೆಗೆ ಆತನನ್ನು ಪೋಷಕರು ಎಬ್ಬಿಸಿದರೂ ತಡವಾದ್ದಕ್ಕೆ ಆತ ಕೂಗಾಡಿದ್ದಾನೆ. ಇದನ್ನು ಜಾಯ್ ಪ್ರಶ್ನಿಸಿದಾಗ, ರಿಜೋ ಅವರನ್ನು ದೂಡಿ ಕೆಳಗೆ ತಳ್ಳಿದ್ದಾನೆ.
ನಂತರ ಆತ ತನ್ನ ತಂದೆ ಜಾಯ್ ಅವರನ್ನು ಕ್ರೂರವಾಗಿ ಹೊಡೆಯಲು ಪ್ರಾರಂಭಿಸಿದ. ಜಾಯ್ಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆಯಲ್ಲಿ ಅವರು ಮೃತಪಟ್ಟರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

