ಉಡುಪಿ ಅಂಬಲಪಾಡಿಯ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾಮಂಡಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಅಂಬಲಪಾಡಿಯ ಕಂಬ್ಳಕಟ್ಟದಲ್ಲಿರುವ ಸಂಸ್ಥೆಯ ಜನಾರ್ದನ ಮಂಟಪದಲ್ಲಿ ಹತ್ತು ದಿನಗಳ ಪರ್ಯಂತ ನಡೆಸಿದ ‘ಯಕ್ಷಗಾನ ಶಿಬಿರ’ ಇಂದು (04-05-2023) ಸಮಾಪನಗೊಂಡಿತು.

ಶಿಬಿರದಲ್ಲಿ 56 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಎಲ್ಲರಿಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು.ಸಂಸ್ಥೆಯ ಅಧ್ಯಕ್ಷ ಕೆ.ಅಜಿತ್ಕುಮಾರ್ ಸ್ವಾಗತಿಸಿದರು. ನಿಕಟಪೂರ್ವಅಧ್ಯಕ್ಷ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ಎಸ್. ವಿ.ಭಟ್, ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಪ್ರಮಾಣಪತ್ರ ವಿತರಿಸಿದರು. ಸಂಸ್ಥೆಯ ಉಪಾಧ್ಯಕ್ಷ ಕೆ.ಜೆ. ಗಣೇಶ್, ಕೆ. ಜೆ. ಕೃಷ್ಣ, ಗೋವಿಂದ ಭಂಡಾರಿ ಉಪಸ್ಥಿತರಿದ್ದರು. ಶಿಬಿರದ ನಿರ್ದೇಶಕರಾದ ಕೋಟ ನರಸಿಂಹ ತುಂಗರನ್ನುಶಾಲು ಹೊದಿಸಿ ಗೌರವಿಸಲಾಯಿತು.
ಬಳಿಕ ವಿದ್ಯಾರ್ಥಿಗಳಿಂದ ಪೂರ್ವರಂಗದ ಪ್ರಾತ್ಯಕ್ಷಿಕೆ ಜರಗಿತು. ಮೇ 6ರಿಂದ ವಿದ್ಯಾರ್ಥಿಗಳಿಗೆ ಬಣ್ಣಗಾರಿಕೆ ಕಮ್ಮಟ ಜರಗಲಿದೆ ಎಂದು ಅಧ್ಯಕ್ಷರು ತಿಳಿಸಿದರು.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

