ಅಂಬಲಪಾಡಿ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾಮಂಡಳಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ 5 ದಿನಗಳ ವೇಷಗಾರಿಕೆ ಕಮ್ಮಟ ಇಂದು 13.05.2023 ಶ್ರೀ ಜನಾರ್ದನ ಮಂಟಪದಲ್ಲಿ ಸಮಾಪನಗೊಂಡಿತು.

ನರಸಿಂಹ ತುಂಗ ಮತ್ತು ಮಿಥುನ್ ಕುಮಾರ್ ಇವರ ಮಾರ್ಗದರ್ಶನದಲ್ಲಿ 20 ವಿದ್ಯಾರ್ಥಿಗಳು ವಿವಿಧ ವೇಷಗಳ ಮುಖವರ್ಣಿಕೆ ಮಾಡುವುದು ಮತ್ತು ಕಿರೀಟ ಕಟ್ಟಿಕೊಳ್ಳುವ ಕೌಶಲವನ್ನು ಈ ಶಿಬಿರದಲ್ಲಿ ತಿಳಿದುಕೊಂಡರು.

ಸಮಾರೋಪ ಸಮಾರಂಭದಲ್ಲಿ ಶ್ರೀ ವಿಜಯಕುಮಾರ್ ಮುದ್ರಾಡಿ, ಶ್ರೀಮತಿ ವಿದ್ಯಾ ಪ್ರಸಾದ್ ಹಾಗೂ ಶ್ರೀ ಗೋವಿಂದ ಭಂಡಾರಿ ಪಾಲ್ಗೊಂಡರು. ಶ್ರೀ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿ ಶ್ರದ್ಧೆಯಿಂದ ಪಾಲ್ಗೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಮಂಡಳಿಯ ಅಧ್ಯಕ್ಷ ಕೆ. ಅಜಿತ್ಕುಮಾರ್ ಮಾತನಾಡಿ ಮುಂದೆ ಪ್ರತಿ ಭಾನುವಾರ ಯಕ್ಷಗಾನ ನೃತ್ಯ ಅಭಿನಯ ಮತ್ತು ವೇಷಗಾರಿಕೆ ತರಗತಿಗಳು ಜರುಗಲಿವೆ ಎಂದು ತಿಳಿಸಿದರು.
ಶಿಬಿರಾರ್ಥಿಗಳ ಪರವಾಗಿ ಶೈಲೇಶ್, ಮಾನ್ಯ, ಅದಿತಿ ಹಾಗೂ ಶ್ರಾವ್ಯ ಇವರು ಶಿಬಿರದ ತಮ್ಮ ಅಮೂಲ್ಯ ಅನುಭವವನ್ನು ಹಂಚಿಕೊಂಡರು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು.


- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

