ಅಂಬಲಪಾಡಿ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾಮಂಡಳಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ 5 ದಿನಗಳ ವೇಷಗಾರಿಕೆ ಕಮ್ಮಟ ಇಂದು 13.05.2023 ಶ್ರೀ ಜನಾರ್ದನ ಮಂಟಪದಲ್ಲಿ ಸಮಾಪನಗೊಂಡಿತು.

ನರಸಿಂಹ ತುಂಗ ಮತ್ತು ಮಿಥುನ್ ಕುಮಾರ್ ಇವರ ಮಾರ್ಗದರ್ಶನದಲ್ಲಿ 20 ವಿದ್ಯಾರ್ಥಿಗಳು ವಿವಿಧ ವೇಷಗಳ ಮುಖವರ್ಣಿಕೆ ಮಾಡುವುದು ಮತ್ತು ಕಿರೀಟ ಕಟ್ಟಿಕೊಳ್ಳುವ ಕೌಶಲವನ್ನು ಈ ಶಿಬಿರದಲ್ಲಿ ತಿಳಿದುಕೊಂಡರು.

ಸಮಾರೋಪ ಸಮಾರಂಭದಲ್ಲಿ ಶ್ರೀ ವಿಜಯಕುಮಾರ್ ಮುದ್ರಾಡಿ, ಶ್ರೀಮತಿ ವಿದ್ಯಾ ಪ್ರಸಾದ್ ಹಾಗೂ ಶ್ರೀ ಗೋವಿಂದ ಭಂಡಾರಿ ಪಾಲ್ಗೊಂಡರು. ಶ್ರೀ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿ ಶ್ರದ್ಧೆಯಿಂದ ಪಾಲ್ಗೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಮಂಡಳಿಯ ಅಧ್ಯಕ್ಷ ಕೆ. ಅಜಿತ್ಕುಮಾರ್ ಮಾತನಾಡಿ ಮುಂದೆ ಪ್ರತಿ ಭಾನುವಾರ ಯಕ್ಷಗಾನ ನೃತ್ಯ ಅಭಿನಯ ಮತ್ತು ವೇಷಗಾರಿಕೆ ತರಗತಿಗಳು ಜರುಗಲಿವೆ ಎಂದು ತಿಳಿಸಿದರು.
ಶಿಬಿರಾರ್ಥಿಗಳ ಪರವಾಗಿ ಶೈಲೇಶ್, ಮಾನ್ಯ, ಅದಿತಿ ಹಾಗೂ ಶ್ರಾವ್ಯ ಇವರು ಶಿಬಿರದ ತಮ್ಮ ಅಮೂಲ್ಯ ಅನುಭವವನ್ನು ಹಂಚಿಕೊಂಡರು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು.


- ಇಮ್ರಾನ್ ಖಾನ್ ಜೀವಂತವಾಗಿದ್ದಾರೆಯೇ? ಜೈಲಿನಲ್ಲಿಯೇ ಸಾವಿನ ಸಂದೇಹ
- ನೆಟ್ಫ್ಲಿಕ್ಸ್ನ ‘ಲವ್ ಈಸ್ ಬ್ಲೈಂಡ್’ (Love Is Blind) ಈಗ ಬಹು ಜನಪ್ರಿಯ
- 3.7 ಮಿಲಿಯನ್ ಪೌಂಡ್ (47 ಕೋಟಿ ರೂಪಾಯಿ) ಮೌಲ್ಯದ ಫೆರಾರಿ ಕಾರು ಪೊಲೀಸ್ ಕಾರ್ಯಾಚರಣೆಯಲ್ಲಿ ವಶಕ್ಕೆ
- ಉಜಿರೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಯುವಕ ಸಾವು: UJIRE
- ಒಂದೇ ದೋಣಿಯಲ್ಲಿ ಕುಳಿತು ಇಂಗ್ಲಿಷ್ ಕಾಲುವೆಯನ್ನು ದಾಟಿದ 230 ಜನರು!

