ಉಡುಪಿ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ, ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಅನುಕ್ರಮವಾಗಿ ಅರ್ಥಧಾರಿ, ಪತ್ರಕರ್ತ, ಲೇಖಕ, ವಿಮರ್ಶಕ, ಸಂಘಟಕ ಶ್ರೀಕರ ಭಟ್ ಹಾಗೂ ಅರ್ಥಧಾರಿ, ಸಂಶೋಧಕ, ಲೇಖಕ, ಪ್ರವಚನಕಾರ ಡಾ.ಪಾದೆಕಲ್ಲು ವಿಷ್ಣು ಭಟ್ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ತಾಳಮದ್ದಲೆ ಸಪ್ತಾಹ ಮೇ 21ರಿಂದ 27ರ ವರೆಗೆ ನಡೆಯಲಿದ್ದು, ಮೇ 27 ಶನಿವಾರ ಸಂಜೆ 5.00 ಗಂಟೆಗೆ ಶಿರ್ವದ ಮಹಿಳಾ ಸೌಧದಲ್ಲಿ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಈ ವಿಷಯವನ್ನು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿಯು ರೂ. 20,000/- ನಗದು ಪುರಸ್ಕಾರ ಒಳಗೊಂಡಿರುತ್ತದೆ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

