ಕಾಪು ವಿಧಾನಸಭಾ ಕ್ಷೇತ್ರದ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಆರಂಭ.
ಯಕ್ಷಶಿಕ್ಷಣ ಟ್ರಸ್ಟ್ ಇವರ ಸಹಯೋಗದಲ್ಲಿ ಯಕ್ಷಗಾನದ ತರಗತಿಯು ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಇಂದು (12-7-2023) ಆರಂಭವಾಯಿತು.
ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಮ್. ಗಂಗಾಧರ ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮಕ್ಕಳಿಗೆ ಪುರಾಣಜ್ಞಾನ, ಭಾರತೀಯ ಸಂಸ್ಕೃತಿಯ ತಿಳಿವನ್ನು ಹೆಚ್ಚಿಸಿಕೊಳ್ಳಲು ಯಕ್ಷಗಾನ ಸಹಕಾರಿಯಾಗಿದೆ ಎಂದು ಅವರು ನುಡಿದರು.
ಕಲಾರಂಗದ ಉಪಾಧ್ಯಕ್ಷರಾದ ವಿ. ಜಿ. ಶೆಟ್ಟರು ಶುಭ ಹಾರೈಸಿದರು. ಯಕ್ಷಶಿಕ್ಷಣ ಟ್ರಸ್ಟ್ನ ಕಾರ್ಯದರ್ಶಿಯಾದ ಮುರಲಿ ಕಡೆಕಾರ್ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಯಕ್ಷಶಿಕ್ಷಣ ಸಹಕಾರಿ ಎಂಬುದನ್ನು ಅರಿತ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರ ವಿಶೇಷ ಆಸಕ್ತಿಯಿಂದಾಗಿ ಈ ಬಾರಿ ಕಾಪು ವಿಧಾನಸಭಾ ವ್ಯಾಪ್ತಿಯ 15 ಪ್ರೌಢಶಾಲೆಗಳಲ್ಲಿ ಯಕ್ಷಗಾನ ತರಗತಿ ಆರಂಭಿಸಲಾಗಿದೆ ಎಂದರು.
ಪ್ರೌಢಶಾಲಾ ಮುಖ್ಯಶಿಕ್ಷಕರಾದ ಅನುರಾಧಾ ಪಿ. ಎಸ್. ಇವರು ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರಾದ ಅಶೋಕ ಕೆ. ಇವರು ಕೃತಜ್ಞತೆ ಸಮರ್ಪಿಸಿದರು.
ಸಂಸ್ಕೃತ ಭಾಷಾ ಶಿಕ್ಷಕರಾದ ಡಾ. ರಾಘವೇಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು. ಯಕ್ಷಗಾನದ ಗುರುಗಳಾದ ನಿತಿನ್ ಪಡುಬಿದ್ರಿ ಇವರು ಗಣಪತಿ ಸ್ತುತಿಯೊಂದಿಗೆ ಯಕ್ಷಗಾನ ತರಬೇತಿಯನ್ನು ಆರಂಭಿಸಿದರು

- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
- ಬ್ಯಾರನ್ನನ್ನು ಎಲ್ಲಿ ಕೊಲ್ಲಬೇಕು”: ಟ್ರಂಪ್ ಅವರ ಪುತ್ರನ ತಲೆಗೆ 95 ಕೋಟಿ ರೂ. ಬಹುಮಾನ ಘೋಷಿಸಿದ ಇರಾನ್.

