20-07-2023 ರಂದು ಬ್ರಹ್ಮಾವರದ ಎಸ್.ಎಮ್.ಎಸ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಉಡುಪಿ ಯಕ್ಷಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆಗೊಂಡಿತು.
ಯಕ್ಷಗಾನ ಕಲಾರಂಗದ ಉಪಾಧ್ಯಕ್ಷರಾದ ಎಸ್. ವಿ. ಭಟ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಾದ್ಯಕ್ಷ ವಿ. ಜಿ. ಶೆಟ್ಟಿ ಯಕ್ಷಶಿಕ್ಷಣ ಯಶಸ್ವಿಯಾಗುವಲ್ಲಿ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆ ಬಹಳ ಮುಖ್ಯವಾದುದೆಂದು ಹೇಳಿದರು.
ಹಿರಿಯ ಶಿಕ್ಷಕಿ ಲಕ್ಷ್ಮಿಯವರು ಸ್ವಾಗತಿಸಿದರು. ಯಕ್ಷ ಗುರು ಮಂಜುನಾಥ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಕವಿತಾ ಧನ್ಯವಾದ ಸಮರ್ಪಿಸಿದರು.
