ಸಿರಿಬಾಗಿಲು ಪ್ರತಿಷ್ಠಾನದಲ್ಲಿ ರಾಮಾಯಣ ಮಾಸಾಚರಣೆ
ಸಾಂಸ್ಕೃತಿಕ ಕ್ಷೇತ್ರದಲ್ಲಿ ಹಲವು ಚಟುವಟಿಕೆ ಯ ಮೂಲಕ ಜನಪ್ರಿಯವಾಗಿರುವ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಇದೇ ತಿಂಗಳ 11 ನೇ ತಾರೀಕಿನಿಂದ 17 ರ ವರೇಗೆ ರಾಮಾಯಣ ಮಾಸಾಚರಣೆ ಪ್ರಯುಕ್ತ ಸಪ್ತಾಹ ಕಾರ್ಯಕ್ರಮ ನಡೆಯಲಿದೆ.
ಪ್ರತಿದಿನವೂ ಮಧ್ಯಾಹ್ನ 2-30 , ಕ್ಕೆ ರಾಮಾಯಣ ಕೃತಿಯ ಯಕ್ಷಗಾನ ತಾಳಮದ್ದಳೆ, ಸಂಜೆ 6 ರಿಂದ ಭಜನೆ, 7 ರಿಂದ ಪ್ರವಚನ- ರಾಮನಾಮ ಜಪಯಜ್ನ ನಡೆಯಲಿದೆ.
ಪ್ರತಿದಿನ ಶ್ರೀ ಪುಂಡರೀಕಾಕ್ಷ ಬೆಳ್ಳೂರು, ಯೋಗಾಚಾರ್ಯ ಇವರಿಂದ ಪ್ರವಚನ ನಡೆಯಲಿದೆ. 11 ರಂದು ಹಾಗು 17 ರಂದು ಪ್ರಸಿದ್ದ ಕಲಾವಿದರಿಂದ, ಹಾಗುಉಳಿದ ದಿನಗಳಲ್ಲಿ ಸಂಘ ಸಂಸ್ಥೆಗಳ ತಾಳಮದ್ಲೆ ನಡೆಯಲಿರುವುದು.
ಈ ಕಾರ್ಯಕ್ರಮದ ಉಧ್ಘಾಟನೆಯ ನ್ನು ಡಾ. ಹಾದಿಗಲ್ಲು ಲಕ್ಷ್ಮೀನಾರಾಯಣ ಧರ್ಮದರ್ಶಿ
ಶ್ರೀ ಅಭಯಲಕ್ಷ್ಮೀನೃಸಿಂಹ ದೇವಸ್ಥಾನ ಹಾದಿಗಲ್ಲು
ತೀರ್ಥಹಳ್ಳಿ ತಾಲೂಕು
ಶಿವಮೊಗ್ಗ ಜಿಲ್ಲೆ ಇವರು ನೆರವೇರಿಸಲಿರುವರು.
ಅದ್ಯಕ್ಷತೆ : ಡಾ.ಶಿವರಾಮ ಶೆಟ್ಟಿ ತಲ್ಲೂರು, ಅಧ್ಯಕ್ಷರು, ತಲ್ಲೂರು ಫೇಮಿಲಿ ಟ್ರಸ್ಟ್, ಉಡುಪಿ
ಅತಿಥಿಗಳು: ಶ್ರೀ ದಿವಾಣ ಗೋವಿಂದ ಭಟ್, ನಿರ್ದೇಶಕರು,ಅನನ್ಯ ಫೀಡ್ಸ್, ತಾರಿಹಳ್ಳ, ಹುಬ್ಬಳ್ಳಿ
ಶ್ರೀ ಅವಿನಾಶ್ ರಾವ್ ಬರಂಗಾಯಿ, ಧರ್ಮಸ್ಥಳ.
ಕಲಾಪೋಷಕರು.

ತದನಂತರ ಪ್ರಸಿದ್ದ ಕಲಾವಿದರಿಂದ
ಪಾರ್ತಿಸುಬ್ಬ ವಿರಚಿತ
ಪಟ್ಟಾಭಿಷೇಕ
ಭಾಗವತರು: ಶ್ರೀ ರಮೇಶ್ ಭಟ್ ಪುತ್ತೂರು
ಚೆಂಡೆ: ಮದ್ದಲೆ; ಶ್ರೀ ಮುರಾರಿ ಕಡಂಬಳಿತ್ತಾಯ,ಶ್ರೀ ಲಕ್ಷ್ಮೀಶ ಬೆಂಗ್ರೋಡಿ
ದಶರಥ:ಶ್ರೀ ರಾಧಾಕೃಷ್ಣ ಕಲ್ಚಾರ್
ಕೈಕೇಯಿ:ಶ್ರೀ ಹರೀಶ್ ಬಳಂತಿಮೊಗರು
ಮಂಥರೆ:ಶ್ರೀ ವೈಕುಂಠ ಹೇರ್ಳೆ ಸಾಸ್ತಾನ
ಶ್ರೀರಾಮ: ಡಾ.ಶ್ರುತಕೀರ್ತಿರಾಜ್ ಉಜಿರೆ
ಲಕ್ಷ್ಮಣ ;ಶ್ರೀ ಲಕ್ಷ್ಮಣ ಕುಮಾರ್ ಮರಕಡ
ಪ್ರತಿ ದಿನವೂ ನಾಡಿನ ಗಣ್ಯರು ಭಾಗವಹಿಸಲಿದ್ದಾರೆ. ಎಂದು ಸಿರಿಬಾಗಿಲು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

