ಮಗಳಿಗೆ ಕಿರುಕುಳ ನೀಡಿದ್ದಕ್ಕೆ ಪ್ರಶ್ನಿಸಿದ್ದಕ್ಕೆ ಹಾವನ್ನು ಕೋಣೆಯೊಳಗೆ ಎಸೆದು ವ್ಯಕ್ತಿಯನ್ನು ಕೊಲ್ಲಲು ಯತ್ನಿಸಿದ ಯುವಕನ ಬಂಧನ
ತಿರುವನಂತಪುರ: ಹಾವು ಬಳಸಿ ವ್ಯಕ್ತಿಯೊಬ್ಬನನ್ನು ಕೊಲ್ಲಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಕಟ್ಟಕ್ಕಡದಲ್ಲಿ ನಡೆದ ಘಟನೆಯಲ್ಲಿ ಗುಂಡುರಾವ್ ಅಲಿಯಾಸ್ ಕಿಚ್ಚು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಅಂಬಲತಿಂಕಲ ಮೂಲದ ರಾಜು ಎಂಬಾತನನ್ನು ಕಿಚ್ಚು ಕೊಲೆಗೆ ಯತ್ನಿಸಿದ್ದ.
ಕಿಚ್ಚು ತನ್ನ ಮಗಳಿಗೆ ಕಿರುಕುಳ ನೀಡಿದ್ದಕ್ಕೆ ರಾಜು ಪ್ರಶ್ನಿಸಿದ್ದ. ಇದಕ್ಕೆ ಪ್ರತೀಕಾರವಾಗಿ ಕಿಚ್ಚು ರಾಜು ಕೊಲೆಗೆ ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಹಾವನ್ನು ಕಿಟಕಿಯ ಮೂಲಕ ರಾಜು ಅವರ ಕೋಣೆಗೆ ಎಸೆದಿದ್ದಾರೆ.
ಆರೋಪಿ ಪೊಲೀಸರ ಬಳಿ ಅಪರಾಧ ಒಪ್ಪಿಕೊಂಡಿದ್ದಾನೆ. ತದನಂತರ ಅವನನ್ನು ಬಂಧಿಸಲಾಯಿತು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

