ತಿರುಮಲ (ಆಂಧ್ರಪ್ರದೇಶ), ಆಗಸ್ಟ್ 12 ಆಂಧ್ರಪ್ರದೇಶದ ತಿರುಮಲದಲ್ಲಿ ಚಿರತೆಯೊಂದು ಆರು ವರ್ಷದ ಬಾಲಕಿಯನ್ನು ಕೊಂದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಲಕ್ಷಿತಾ ಎಂಬ ಬಾಲಕಿ ಶುಕ್ರವಾರ ರಾತ್ರಿ ನರಸಿಂಹಸ್ವಾಮಿ ದೇವಸ್ಥಾನದ ಬಳಿ ಅಲಿಪಿರಿ ವಾಕ್ವೇನಲ್ಲಿ ತಿರುಮಲಕ್ಕೆ ಬರುತ್ತಿದ್ದಾಗ ನಾಪತ್ತೆಯಾಗಿದ್ದು, ಶನಿವಾರ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಸಮೀಪ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಕ್ಷಿತಾ ಅವರ ತಂದೆ ದಿನೇಶ್, “ತಿರುಮಲದಲ್ಲಿ ಪಾದಚಾರಿ ಮಾರ್ಗವನ್ನು ಹತ್ತುವಾಗ, ಕೆಲವು ಹೆಜ್ಜೆ ಮುಂದಿದ್ದ ಅವರ ಮಗಳು ಬಿಸ್ಕೆಟ್ ಪ್ಯಾಕೆಟ್ ಖರೀದಿಸಲು ಹೋಗಿದ್ದಳು. ಭಕ್ತಾದಿಗಳ ದಟ್ಟಣೆಯಿಂದಾಗಿ ಮುಂದೆ ಬಂದಿದ್ದಾಳೆ ಎಂದುಕೊಂಡೆವು, ಆದರೆ ಸ್ವಲ್ಪ ಸಮಯದ ನಂತರ ನಮಗೆ ಅವಳು ಸಿಗಲಿಲ್ಲ. ನಂತರ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಚಿರತೆ ದಾಳಿಗೆ ಬಲಿಯಾಗಿದ್ದಾಳೆ.
ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಿರುಪತಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

