ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಕಾರವಾರ ಇದರ ಶಿರ್ವ ಶಾಖೆಯ ವತಿಯಿಂದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಂದು ಆಕ್ಸಿಲಿಯಮ್ ನಿವಾಸದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳನ್ನು ಮತ್ತು ಸಿಹಿತಿಂಡಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಿರ್ವ ಆರೋಗ್ಯ ಮಾತಾ ಚರ್ಚಿನ ಮುಖ್ಯ ಧರ್ಮಗುರುಗಳು ಫಾ| ಲೆಸ್ಲಿ ಡಿಸೋಜ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಮೆಲ್ವಿನ್ ಅರಾನ್ನಾ, ಉದ್ಯಮಿ ಕೆ. ಶ್ರೀಧರ ಕಾಮತ್, ಕಾನ್ವೆಂಟಿನ ಮೇಲ್ವಿಚಾರಕಿ ಲೀಮಾ,
ಶಾಖಾ ವ್ಯವಸ್ಥಾಪಕರಾದ ಪ್ರಮೀಳಾ ಲೋಬೋ ಮತ್ತು ಕಾನ್ವೆಂಟಿನ ಧರ್ಮ ಭಗಿನಿಯರು ಹಾಗೂ ಶಾಖೆಯ ಸಿಬ್ಬಂದಿಗಳು ಹಾಜರಿದ್ದರು.
