ತಿರುವನಂತಪುರಂನ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿರುವ ವಿದ್ಯಾರ್ಥಿಯ ಪೋಷಕರು ತಮ್ಮ ಶಾಲಾ ಶುಲ್ಕ ಬಾಕಿ ಇರುವ ಕಾರಣಕ್ಕಾಗಿ ಪ್ರಾಂಶುಪಾಲರು ತಮ್ಮ ಮಗನನ್ನು ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಕೇರಳದ ತಿರುವನಂತಪುರಂನಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಮಾಸಿಕ ಶುಲ್ಕ ಪಾವತಿಸಲು ವಿಫಲವಾದ ಕಾರಣ ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯುವಂತೆ ಒತ್ತಾಯಿಸಲಾಗಿದೆ ಎಂದು ಖಾಸಗಿ ಶಾಲೆಯ ವಿದ್ಯಾರ್ಥಿಯ ಪೋಷಕರು ಶುಕ್ರವಾರ ಆರೋಪಿಸಿದ್ದಾರೆ.
ಘಟನೆಯ ಕುರಿತು ತನಿಖೆ ನಡೆಸುವಂತೆ ಕೇರಳದ ಸಾಮಾನ್ಯ ಶಿಕ್ಷಣ ಸಚಿವ ವಿ ಶಿವನ್ಕುಟ್ಟಿ ಶನಿವಾರ ಸಾಮಾನ್ಯ ಶಿಕ್ಷಣ ನಿರ್ದೇಶಕ (ಡಿಜಿಇ) ಶಾನವಾಸ್ ಎಸ್ ಅವರಿಗೆ ಸೂಚನೆ ನೀಡಿದ್ದಾರೆ.
ವಿಚಾರಣೆ ಆಧರಿಸಿ ವರದಿ ಸಲ್ಲಿಸುವಂತೆ ಡಿಜಿಇಗೆ ಸೂಚಿಸಲಾಗಿದೆ.