ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದಲ್ಲಿ ಇದೇ ಬರುವ 16 ನೇ ತಾರೀಕು ಸೋಮವಾರ ನವರಾತ್ರಿ ಶುಭ ಸಂದರ್ಭದಲ್ಲಿ ಸಂಜೆ 4 ಗಂಟೆಗೆ ತೆಂಕುತಿಟ್ಟು ಯಕ್ಷ ಮಾರ್ಗ- 2 ಉದ್ಘಾಟನೆ ಹಾಗೂ ತೆಂಕುತಿಟ್ಟು ಹಿಮ್ಮೇಳ ತರಗತಿ ಆರಂಭವಾಗಲಿದೆ.
ತೆಂಕುತಿಟ್ಟು ಯಕ್ಷಗಾನದ ಶಾಸ್ತ್ರೀಯ ನಾಟ್ಯ ಗುರುಗಳಾದ ಕರ್ಗಲ್ಲು ವಿಶ್ವೇಶ್ವರ ಭಟ್ ಇವರಿಂದ ತೆಂಕುತಿಟ್ಟು ಯಕ್ಷಮಾರ್ಗ ಒಂದು ಕಾರ್ಯಕ್ರಮ ಕಳೆದ ತಿಂಗಳು ನಡೆದಿರುತ್ತದೆ. ತೆಂಕುತಿಟ್ಟು ಶಾಸ್ತ್ರಿಯ ನಾಟ್ಯದ ಪ್ರಾತ್ಯಕ್ಷಿಕೆ ಹಾಗೂ ದಾಖಲೀಕರಣ -ಸಂವಾದಗಳು ನಡೆಯಲಿದೆ. ದಾಖಲೀಕರಣಗಳು ಸಂಪೂರ್ಣ ಸಿರಿಬಾಗಿಲು ಪ್ರತಿಷ್ಠಾನದ ಅಧ್ಯಯನ ಕೇಂದ್ರದಲ್ಲಿ ಶಾಶ್ವತವಾಗಿರುತ್ತದೆ.
ಮುಂದಿನ ದಿನಗಳಲ್ಲಿ ನಾಟ್ಯ ಅಭ್ಯಾಸದ ಕುರಿತು ಅಧ್ಯಯನ ನಡೆಸುವಲ್ಲಿ ಈ ದಾಖಲಿಕರಣಗಳು ಉಪಯುಕ್ತವಾಗಲಿದೆ. ಅದೇ ದಿನ ಮಾಂಬಾಡಿ ಗುರುಗಳ ಸಲಹೆಯಂತೆ ಕುದುರೆ ಕೂಡ್ಲು ರಾಮಮೂರ್ತಿ ಇವರಿಂದ ತೆಂಕುತಿಟ್ಟು ಯಕ್ಷಗಾನದ ಹಿಮ್ಮೇಳ ತರಗತಿಯು ಆರಂಭವಾಗಲಿದೆ.
ಈ ಕಾರ್ಯಕ್ರಮವನ್ನು ನಾಡಿನ ಗೌರವಾನ್ವಿತ ಉದ್ಯಮಿಗಳಾದ, ಕಲಾಪೋಷಕರು,ಧಾರ್ಮಿಕ ಮುಖಂಡರಾದ ಶ್ರೀ ಕೆ. ಕೆ. ಶೆಟ್ಟಿ ಅಹಮದ್ ನಗರ, ಮಹಾರಾಷ್ಟ್ರ ಇವರು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಕಲಾಭಿಮಾನಿಗಳಾದ ಶ್ರೀ ಶಿವರಾಮ ಭಟ್ ಕಾರಿಂಜೆ ಹಳೆಮನೆ ಇವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
- ನಾಳೆ ದಿನಾಂಕ 06.07.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
- ಖ್ಯಾತ ಯಕ್ಷಗಾನ ವೇಷಧಾರಿ ಕುಂಬಳೆ ಶ್ರೀಧರ ರಾವ್ ಇನ್ನಿಲ್ಲ – ಕುಂಬಳೆ ಶ್ರೀಧರ ರಾಯರ ಕಲಾಜೀವನದ ಮೇಲೊಂದು ಇಣುಕು ನೋಟ
- ಖ್ಯಾತ ಯಕ್ಷಗಾನ ಪ್ರಸಾದನ ತಜ್ಞ, ವೇಷಭೂಷಣಗಳ ನಿರ್ಮಾಪಕ ನಿಧನ
- ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
- ಶ್ರೀಮತಿ ಪರಿಣಯ, ಇಂದ್ರಕೀಲಕ, ಉತ್ತರ ಗೋಗ್ರಹಣ, ಶರಸೇತು ಬಂಧನ – ಕಟೀಲಿನಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಯಕ್ಷಗಾನ ಪ್ರದರ್ಶನಗಳು